ಗಡಿಭದ್ರತಾ ಸೇನೆ 
ದೇಶ

ದೇಶದ ಗಡಿಭಾಗದಲ್ಲಿರುವ ಯುವಕರಿಗೆ ಕದನ ಕಲೆ ಕಲಿಸಲು ಕೇಂದ್ರ ತೀರ್ಮಾನ

ದೇಶದ ಗಡಿಭಾಗದ ಅಭಿವೃದ್ಧಿ ಯೋಜನೆಯ ಅಂಗವಾಗಿ ವಿವಿಧ ದೇಶಗಳಿಗೆ ತಾಗಿಕೊಂಡಿರುವ ಗಡಿಪ್ರದೇಶಗಳ ಯುವಕರಿಗೆ ಕದನಕಲೆ ಕಲಿಸುವ ಬಗ್ಗೆ ಕೇಂದ್ರ ಸರ್ಕಾರ...

ನವದೆಹಲಿ: ದೇಶದ ಗಡಿಭಾಗದ ಅಭಿವೃದ್ಧಿ ಯೋಜನೆಯ ಅಂಗವಾಗಿ ವಿವಿಧ ದೇಶಗಳಿಗೆ ತಾಗಿಕೊಂಡಿರುವ ಗಡಿಪ್ರದೇಶಗಳ ಯುವಕರಿಗೆ ಕದನಕಲೆ ಕಲಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಭೂತಾನ್, ಮ್ಯಾನ್‌ಮಾರ್, ಚೀನಾ ಎಂಬೀ ರಾಷ್ಟ್ರಗಳ ಗಡಿಪ್ರದೇಶದಲ್ಲಿ ವಾಸಿಸುವ ಭಾರತದ ಗ್ರಾಮಗಳ ಯುವಕರಿಗೆ ಕದನ ಕಲೆಗಳಲ್ಲಿ ವಿಶೇಷ ತರಬೇತಿ ನೀಡಲಾಗುವುದು. ಗಡಿ ಪ್ರದೇಶಗಳಲ್ಲಿ ಹೊರದೇಶದಿಂದ ನುಸುಳುಕೋರರು ಬಂದರೆ ಅವರನ್ನು ಎದುರಿಸುವುದಕ್ಕೆ ದೇಶದ ಯುವಕರು ಸನ್ನದ್ಧರಾಗಿರಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಯುವಕರಿಗೆ ತರಬೇತಿ ನೀಡಲು ಗಡಿ ಪ್ರದೇಶದಲ್ಲಿ ಸೇವಾ ನಿರತರಾಗಿರುವ ಸೇನಾ ಮತ್ತು ಅರೆಸೇನಾ ವಿಭಾಗಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.  ಪಾಕಿಸ್ತಾನ, ಬಾಂಗ್ಲಾದೇಶದ ಗಡಿಪ್ರದೇಶದಲ್ಲಿ ಸೇವಾ ನಿರತರಾಗಿರುವ ಗಡಿಭದ್ರತಾ ಸೇನೆ, ನೇಪಾಳ- ಭೂತಾನ್ ಗಡಿಪ್ರದೇಶದಲ್ಲಿರುವ ಸಶಸ್ತ್ರ ಸೀಮಾ ಬಲ್, ಭಾರತ -ಚೀನಾ ಗಡಿಯಲ್ಲಿರು ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್ ಫೋರ್ಸ್ ಮೊದಲಾದವುಗಳಿಗೆ ಈ ನಿರ್ದೇಶನ ನೀಡಲಾಗಿದೆ. 
ಆಯುಧಧಾರಿಗಳನ್ನು ಎದುರಿಸುವುದು ಹೇಗೆ, ಶೂಟಿಂಗ್, ಬಿಲ್ಲು ವಿದ್ಯೆ, ಬಾಕ್ಸಿಂಗ್ ಮೊದಲಾದ ಕಲೆಗಳನ್ನೂ ಯುವಕರಿಗೆ ಕಲಿಸಿಕೊಡಲಾಗುವುದು. 
ಭಾರತ ಇದೀಗ ಈ ರೀತಿಯ ಯೋಜನೆಗೆ ಚಿಂತನೆ ನಡೆಸಿದ್ದರೂ, ಚೀನಾ, ಸಿಂಗಾಪುರ್, ಇಸ್ರೇಲ್, ದಕ್ಷಿಣ ಕೊರಿಯಾ ಮೊದಲಾರ ದೇಶಗಳಲ್ಲಿ ಈಗಾಗಲೇ ಯುವಕರಿಗೆ ಇಂಥಾ ತರಬೇತಿಗಳನ್ನು ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?