ಪಿಎಂ ಭಾರ್ಗವ 
ದೇಶ

ಆಯುರ್ವೇದ ಹಲವು ಕಾಯಿಲೆಗಳಿಗೆ ಗೋಮಾಂಸ ಸೇವನೆಯನ್ನು ಸೂಚಿಸಿದೆ: ವಿಜ್ಞಾನಿ ಭಾರ್ಗವ

ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿ ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸಿದ್ದ ವಿಜ್ಞಾನಿ ಪಿಎಂ ಭಾರ್ಗವ ಗೋಮಾಂಸದ ಬಗ್ಗೆ ಮಾತನಾಡಿದ್ದಾರೆ.

ಚೆನ್ನೈ: ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿ ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸಿರುವ ವಿಜ್ಞಾನಿ ಪಿಎಂ ಭಾರ್ಗವ  ಗೋಮಾಂಸದ ಬಗ್ಗೆ ಮಾತನಾಡಿದ್ದು, ಆಯುರ್ವೇದದಲ್ಲಿ ಹಲವು ಕಾಯಿಲೆಗಳಿಗೆ ಗೋಮಾಂಸವನ್ನು ಪರಿಹಾರವಾಗಿ ಸೂಚಿಸಿದೆ ಎಂದು ಹೇಳಿದ್ದಾರೆ.
ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸುತ್ತಿರುವ ಬಗ್ಗೆ ರಾಷ್ಟ್ರಪತಿಗಳಿಗೆ ಬರೆದಿರುವ ಭಾರ್ಗವ  ಅವರು ಪುರಾತನ ಕಾಲದ ಭಾರತದಲ್ಲಿ ಗೋಮಾಂಸ ಸೇವನೆಗೆ ಯಾವುದೇ ನಿರ್ಬಂಧ ಇರಲಿಲ್ಲ ಎಂದು ಹೇಳಿದ್ದಾರೆ. ಚರಕ ಸಂಹಿತೆಯನ್ನು ಉಲ್ಲೇಖಿಸಿರುವ  ಭಾರ್ಗವ, ವಾಯು, ಅನಿಯಮಿತ ಜ್ವರ, ಒಣ ಕೆಮ್ಮು, ಆಯಾಸ ಸೇರಿದಂತೆ ಹಲವು ವಿಧದ ಕಾಯಿಲೆಗಳಿಗೆ ಗೋಮಾಂಸ ಸೇವನೆ ಮಾಡಲು ಅನುಮತಿ ಇತ್ತು ಎಂದು ಹೇಳಿದ್ದಾರೆ.
ನಾನು ಏನು ತಿನ್ನಬೇಕು, ಯಾವುದನ್ನು ಧರಿಸಬೇಕು, ಯಾರನ್ನು ಪ್ರೀತಿಸಬೇಕು ಎಂಬುದನ್ನು ನಿರ್ಧರಿಸಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಗೆ ಸಂಬಂಧಿಸಿದ ಸಂಘಟನೆಗಳೇ ದಾದ್ರಿ ಪ್ರಕರಣಕ್ಕೆ ಕಾರಣ ಎಂದು ಭಾರ್ಗವ ಆರೋಪಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿಜ್ಞಾನಿ ಭಾರ್ಗವ, ಅಕ್ಟೋಬರ್ ನಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ವಾಪಸ್ ನೀಡುವ ನಿರ್ಧಾರ ಪ್ರಕಟಿಸಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT