ಪಿಎಂ ಭಾರ್ಗವ 
ದೇಶ

ಆಯುರ್ವೇದ ಹಲವು ಕಾಯಿಲೆಗಳಿಗೆ ಗೋಮಾಂಸ ಸೇವನೆಯನ್ನು ಸೂಚಿಸಿದೆ: ವಿಜ್ಞಾನಿ ಭಾರ್ಗವ

ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿ ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸಿದ್ದ ವಿಜ್ಞಾನಿ ಪಿಎಂ ಭಾರ್ಗವ ಗೋಮಾಂಸದ ಬಗ್ಗೆ ಮಾತನಾಡಿದ್ದಾರೆ.

ಚೆನ್ನೈ: ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿ ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸಿರುವ ವಿಜ್ಞಾನಿ ಪಿಎಂ ಭಾರ್ಗವ  ಗೋಮಾಂಸದ ಬಗ್ಗೆ ಮಾತನಾಡಿದ್ದು, ಆಯುರ್ವೇದದಲ್ಲಿ ಹಲವು ಕಾಯಿಲೆಗಳಿಗೆ ಗೋಮಾಂಸವನ್ನು ಪರಿಹಾರವಾಗಿ ಸೂಚಿಸಿದೆ ಎಂದು ಹೇಳಿದ್ದಾರೆ.
ಪದ್ಮಭೂಷಣ ಪ್ರಶಸ್ತಿ ಹಿಂತಿರುಗಿಸುತ್ತಿರುವ ಬಗ್ಗೆ ರಾಷ್ಟ್ರಪತಿಗಳಿಗೆ ಬರೆದಿರುವ ಭಾರ್ಗವ  ಅವರು ಪುರಾತನ ಕಾಲದ ಭಾರತದಲ್ಲಿ ಗೋಮಾಂಸ ಸೇವನೆಗೆ ಯಾವುದೇ ನಿರ್ಬಂಧ ಇರಲಿಲ್ಲ ಎಂದು ಹೇಳಿದ್ದಾರೆ. ಚರಕ ಸಂಹಿತೆಯನ್ನು ಉಲ್ಲೇಖಿಸಿರುವ  ಭಾರ್ಗವ, ವಾಯು, ಅನಿಯಮಿತ ಜ್ವರ, ಒಣ ಕೆಮ್ಮು, ಆಯಾಸ ಸೇರಿದಂತೆ ಹಲವು ವಿಧದ ಕಾಯಿಲೆಗಳಿಗೆ ಗೋಮಾಂಸ ಸೇವನೆ ಮಾಡಲು ಅನುಮತಿ ಇತ್ತು ಎಂದು ಹೇಳಿದ್ದಾರೆ.
ನಾನು ಏನು ತಿನ್ನಬೇಕು, ಯಾವುದನ್ನು ಧರಿಸಬೇಕು, ಯಾರನ್ನು ಪ್ರೀತಿಸಬೇಕು ಎಂಬುದನ್ನು ನಿರ್ಧರಿಸಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಗೆ ಸಂಬಂಧಿಸಿದ ಸಂಘಟನೆಗಳೇ ದಾದ್ರಿ ಪ್ರಕರಣಕ್ಕೆ ಕಾರಣ ಎಂದು ಭಾರ್ಗವ ಆರೋಪಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿಜ್ಞಾನಿ ಭಾರ್ಗವ, ಅಕ್ಟೋಬರ್ ನಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ವಾಪಸ್ ನೀಡುವ ನಿರ್ಧಾರ ಪ್ರಕಟಿಸಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!