ದೇಶ

ಮಳೆಗೆ ತಮಿಳುನಾಡಿನಲ್ಲಿ 19 ಬಲಿ

Shilpa D

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನ ತತ್ತರಿಸಿದ್ದಾರೆ. ಕಳೆದೆರಡು ದಿನಗಳಿಂದ ಪ್ರವಾಹ ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ 19 ಜನರು ಮೃತಪಟ್ಟಿದ್ದಾರೆ.

ಇನ್ನು ಮಳೆಯಿಂದ ಸಾವಿಗೀಡಾಗಿರುವ 19 ಜನರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಜೆ.ಜಯಲಲಿತಾ, ಮೃತ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ತಮಿಳುನಾಡು ಸರ್ಕಾರವು 76 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮೃತರ ಕುಟುಂಬಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸತ್ತ 19 ಜನರಲ್ಲಿ 16 ಜನರು ಕಡಲೂರಿನಲ್ಲಿಯೇ ಮೃತಪಟ್ಟಿದ್ದಾರೆ. 16 ಜನರ ಪೈಕಿ 15 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಮತ್ತೊಬ್ಬರು ಗೋಡೆ ಕುಸಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

SCROLL FOR NEXT