ಸುನಂದಾ ಪುಷ್ಕರ್ (ಸಂಗ್ರಹ ಚಿತ್ರ) 
ದೇಶ

ವಿಷ ಪ್ರಾಷನದಿಂದ ಸುನಂದಾ ಪುಷ್ಕರ್ ಸಾವನ್ನಪ್ಪಿಲ್ಲ: ಎಫ್ ಬಿಐ ವರದಿ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಮಾಡಿ ಸಹಾಯಕ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ವಿಷ ಪ್ರಾಷನದಿಂದ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳಿಗೆ ಎಫ್ ಬಿಐ ಬುಧವಾರ ತಿಳಿಸಿದೆ...

ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ಮಾಡಿ ಸಹಾಯಕ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ವಿಷ ಪ್ರಾಷನದಿಂದ ಸಾವನ್ನಪ್ಪಿಲ್ಲ ಎಂದು ಅಧಿಕಾರಿಗಳಿಗೆ ಎಫ್ ಬಿಐ ಬುಧವಾರ ತಿಳಿಸಿದೆ

ನಿಗೂಢವಾಗಿ ಸಾವನ್ನಪ್ಪಿದ್ದ ಸುನಂದಾ ಪುಷ್ಕರ್ ಅವರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಇದರಂತೆ ಈ ಹಿಂದೆ ಸುನಂದಾ ದೇಹದಲ್ಲಿ ರೇಡಿಯಾಕ್ಟಿವ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದ್ದು, ಈ ವಿಷಕಾರಿ ಅಂಶವೇ ಸುನಂದಾ ಸಾವಿಗೆ ಕಾರಣ ಎಂದು ಹೇಳಲಾಗುತ್ತಿತ್ತು. ಆದರೆ, ಈ ವಿಷಕಾರಿ ಅಂಶಗಳನ್ನು ಅಧ್ಯಯನ ಮಾಡಲು ಭಾರತೀಯ ಪ್ರಯೋಗಾಲಯದಲ್ಲಿ ಸೌಲಭ್ಯಗಳಿಲ್ಲ ಎಂದು ಹೇಳಿದ್ದ ಅಧಿಕಾರಿಗಳು ಅಧ್ಯಯನ ನಡೆಸಲು ಮಾದರಿಯನ್ನು ಎಫ್ ಬಿಐ ಪ್ರಯೋಗಾಲಯಕ್ಕೆ ಕಳುಹಿಸಿತ್ತು.

ಇದರಂತೆ ಸುನಂದಾ ಸಾವಿನ ಕುರಿತ ವರದಿಯನ್ನು ಇಂದು ಎಫ್ ಬಿಐ ಪ್ರಯೋಗಾಲಯವು ಅಧಿಕಾರಿಗಳಿಗೆ ಸಲ್ಲಿಸಿದ್ದು, ವರದಿಯಲ್ಲಿ ಸುನಂದಾ ಸಾವಿಗೆ ವಿಕಿರಣಗಳ ವಿಷ ಕಾರಣವಲ್ಲ. ದೇಹದಲ್ಲಿ ಪತ್ತೆಯಾದ ವಿಷವು ಸಾವನ್ನುಂಟು ಮಾಡುವಷ್ಟು ವಿಷಕಾರಿಯಾಗಿಲ್ಲ ಎಂದು ಹೇಳಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು, ಸುನಂದಾ ಸಾವಿಗೆ ಕಾರಣವಾಗಿರುವ ಪ್ರಮುಖ ಅಂಶಗಳನ್ನು ಶೀಘ್ರದಲ್ಲೇ ಬಹಿರಂಗ ಪಡಿಸಲಾಗುವುದು. ಇದೀಗ ಎಫ್ ಬಿಐ ಸಲ್ಲಿಸಿರುವ ವರದಿಯಲ್ಲಿ ಸುನಂದಾ ಸಾವಿಗೆ ರೇಡಿಯಾಕ್ಟಿವ್ ವಿಷಕಾರಿ ಅಂಶ ಕಾರಣವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಎಂದು ಹೇಳಿದ್ದಾರೆ.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT