ದೇಶ

ದೀಪಾವಳಿ: ನವದೆಹಲಿಯಲ್ಲಿ 290, ಬೆಂಗಳೂರಿನಲ್ಲಿ 19 ಲಘು ಪಟಾಕಿ ಅವಘಡ

ದೀಪಾವಳಿ ಸಂಭ್ರಮದ ನಡುವೆಯೇ ಪಟಾಕಿ ಅವಘಡಗಳೂ ಸಂಭವಿಸಿದೆ. ನವದೆಹಲಿಯೊಂದರಲ್ಲೇ 290 ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ದೀಪಾವಳಿ ಸಂಭ್ರಮದ ನಡುವೆಯೇ ಪಟಾಕಿ ಅವಘಡಗಳೂ ಸಂಭವಿಸಿದೆ. ನವದೆಹಲಿಯೊಂದರಲ್ಲೇ 290 ಪ್ರಕರಣಗಳು ದಾಖಲಾಗಿವೆ.
ಎಲ್ಲಾ ಪ್ರಕರಣಗಳಲ್ಲೂ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ದೆಹಲಿ ಫೈರ್ ಸರ್ವಿಸಸ್(ಡಿಎಫ್ಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.  ಕಳೆದ ವರ್ಷದ ದೀಪಾವಳಿಯಲ್ಲಿ 293 ಕರೆ ಬಂದಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ವಾಹನದಟ್ಟಣೆಯ ಪ್ರದೇಶ ಮತ್ತು ಪ್ರಮುಖ ಮಾರುಕಟ್ಟೆಗಳಿರುವ ಸ್ಥಳ ಸೇರಿದಂತೆ 20 ಪ್ರಮುಖ ಸ್ಥಳಗಳಲ್ಲಿ ಡಿಎಫ್ಎಸ್ 20 ಪ್ರಮುಖ ಸ್ಥಳಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಲ್ಲಿ 19  ಪಟಾಕಿ ಅವಘಡಗಳು ಸಂಭವಿಸಿದ್ದು, ಪಟಾಕಿ ಸಿಡಿಸುವ ವೇಳೆ ಸಣ್ಣಪುಟ್ಟ ಗಾಯಗಳಿಗೆ ಒಳಗಾದವರ ಪೈಕಿ 6, ನಾರಾಯಣ ನೇತ್ರಾಲಯ, 4 ಶಂಕರ ಕಣ್ಣಿನ ಆಸ್ಪತ್ರೆ, 4 ಬೆಂಗಳೂರು ನೇತ್ರಾಲಯ, 3 ಸಂಪ್ರತಿ ಕಣ್ಣಿನ ಅಸ್ಪತ್ರೆಯಲ್ಲಿ ಇಬ್ಬರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.  ಕಳೆದ ಬಾರಿ ಅನೇಕರು ಪಟಾಕಿ ಅವಘಡದಲ್ಲಿ ಕೈ, ಕಾಲು ಕಣ್ಣಿಗೆ ತೀವ್ರ ಹಾನಿ ಮಾಡಿಕೊಂಡಿದ್ದರು. ಈ ಬಾರಿ ಅಂತಹ ಯಾವುದೇ ಗಂಭೀರ ಪ್ರಕರಣಗಳು ನಡೆದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT