ದೇಶ

ದೀಪಾವಳಿ: ನವದೆಹಲಿಯಲ್ಲಿ 290, ಬೆಂಗಳೂರಿನಲ್ಲಿ 19 ಲಘು ಪಟಾಕಿ ಅವಘಡ

ದೀಪಾವಳಿ ಸಂಭ್ರಮದ ನಡುವೆಯೇ ಪಟಾಕಿ ಅವಘಡಗಳೂ ಸಂಭವಿಸಿದೆ. ನವದೆಹಲಿಯೊಂದರಲ್ಲೇ 290 ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ದೀಪಾವಳಿ ಸಂಭ್ರಮದ ನಡುವೆಯೇ ಪಟಾಕಿ ಅವಘಡಗಳೂ ಸಂಭವಿಸಿದೆ. ನವದೆಹಲಿಯೊಂದರಲ್ಲೇ 290 ಪ್ರಕರಣಗಳು ದಾಖಲಾಗಿವೆ.
ಎಲ್ಲಾ ಪ್ರಕರಣಗಳಲ್ಲೂ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ದೆಹಲಿ ಫೈರ್ ಸರ್ವಿಸಸ್(ಡಿಎಫ್ಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.  ಕಳೆದ ವರ್ಷದ ದೀಪಾವಳಿಯಲ್ಲಿ 293 ಕರೆ ಬಂದಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ವಾಹನದಟ್ಟಣೆಯ ಪ್ರದೇಶ ಮತ್ತು ಪ್ರಮುಖ ಮಾರುಕಟ್ಟೆಗಳಿರುವ ಸ್ಥಳ ಸೇರಿದಂತೆ 20 ಪ್ರಮುಖ ಸ್ಥಳಗಳಲ್ಲಿ ಡಿಎಫ್ಎಸ್ 20 ಪ್ರಮುಖ ಸ್ಥಳಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಲ್ಲಿ 19  ಪಟಾಕಿ ಅವಘಡಗಳು ಸಂಭವಿಸಿದ್ದು, ಪಟಾಕಿ ಸಿಡಿಸುವ ವೇಳೆ ಸಣ್ಣಪುಟ್ಟ ಗಾಯಗಳಿಗೆ ಒಳಗಾದವರ ಪೈಕಿ 6, ನಾರಾಯಣ ನೇತ್ರಾಲಯ, 4 ಶಂಕರ ಕಣ್ಣಿನ ಆಸ್ಪತ್ರೆ, 4 ಬೆಂಗಳೂರು ನೇತ್ರಾಲಯ, 3 ಸಂಪ್ರತಿ ಕಣ್ಣಿನ ಅಸ್ಪತ್ರೆಯಲ್ಲಿ ಇಬ್ಬರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.  ಕಳೆದ ಬಾರಿ ಅನೇಕರು ಪಟಾಕಿ ಅವಘಡದಲ್ಲಿ ಕೈ, ಕಾಲು ಕಣ್ಣಿಗೆ ತೀವ್ರ ಹಾನಿ ಮಾಡಿಕೊಂಡಿದ್ದರು. ಈ ಬಾರಿ ಅಂತಹ ಯಾವುದೇ ಗಂಭೀರ ಪ್ರಕರಣಗಳು ನಡೆದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT