ಶತ್ರುಘ್ನ ಸಿನ್ಹಾ ಮತ್ತು ಕೈಲಾಶ್ ವಿಜಯ್ ವಾರ್ಗಿಯಾ(ಸಂಗ್ರಹ ಚಿತ್ರ) 
ದೇಶ

ಮುಖ್ಯಮಂತ್ರಿ ಅಭ್ಯರ್ಥಿ ಮಾಡಬೇಕಿತ್ತು ಎಂದು ನಾನು ಹೇಳಿಲ್ಲ: ಶತ್ರುಘ್ನ ಸಿನ್ಹಾ

ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸೂಚಿಸುತ್ತಿದ್ದರೆ ಬಿಹಾರ ವಿಧಾನಸಭೆಯ ಫಲಿತಾಂಶ ವಿಭಿನ್ನವಾಗಿ ಬರುತ್ತಿತ್ತು ಎಂದು ತಾವು ಎಲ್ಲಿಯೂ...

ನವದೆಹಲಿ: ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸೂಚಿಸುತ್ತಿದ್ದರೆ ಬಿಹಾರ ವಿಧಾನಸಭೆಯ ಫಲಿತಾಂಶ ವಿಭಿನ್ನವಾಗಿ ಬರುತ್ತಿತ್ತು ಎಂದು ತಾವು ಎಲ್ಲಿಯೂ ಹೇಳಿಲ್ಲ ಎಂದು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಬಿಹಾರ ವಿಧಾನಸಭೆಯ ಚುನಾವಣಾ ಪ್ರಚಾರಕ್ಕೆ ಕರೆಯುತ್ತಿದ್ದರೆ ಪರಿಸ್ಥಿತಿ ವಿಭಿನ್ನವಾಗಿರುತ್ತಿತ್ತು ಎಂದಷ್ಟೇ ಹೇಳಿದ್ದೆ ಎಂದು ಸಿನ್ಹಾ ತಿಳಿಸಿದ್ದಾರೆ.

ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನೇಮಿಸುತ್ತಿದ್ದರೆ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ನಾನು ಹೇಳಿದ್ದೇನೆ ಎಂದು ಮಾಧ್ಯಮಗಳು ಆ ಭಾವನೆ ಸೃಷ್ಟಿಸಲು ಪ್ರಯತ್ನಿಸಿದವು. ಆದರೆ ನಾನು ಎಲ್ಲಿಯೂ ಅದನ್ನು ಹೇಳಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನೇಮಿಸಬೇಕಿತ್ತು ಎಂಬ ನಿರೀಕ್ಷೆಯೂ ನನ್ನಲ್ಲಿಲ್ಲ ಎಂದು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಆದರೆ ಬಿಹಾರ ಚುನಾವಣೆಯ ಸೋಲಿಗೆ ನಿಖರ ಕಾರಣಗಳನ್ನು ಗೊತ್ತುಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಬಿಹಾರ ಫಲಿತಾಂಶ ಹೊರಬಿದ್ದಿದೆ. ಇಂತಹ ಅವಮಾನಕರ ಸೋಲು ನಮಗೆ ದುಖ ತಂದಿದೆ. ಸೋಲನ್ನು ನಾವು ಒಪ್ಪಿಕೊಂಡು ಅದಕ್ಕೆ ಕಾರಣ ಹುಡುಕಬೇಕು. ಸೋಲಿನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದರು.

ನಾಯಿಗೆ ಹೋಲನೆ:
ಶತ್ರುಘ್ನ ಸಿನ್ಹಾ ಅವರ ಈ ಹೇಳಿಕೆಯನ್ನು ಬಿಜೆಪಿ ಹಿರಿಯ ನಾಯಕ, ಬಿಹಾರ ವಿಧಾನಸಭಾ ಚುನಾವಣೆಯ ಬಿಜೆಪಿ ಯೋಜಕ ಕೈಲಾಶ್ ವಿಜಯ್ ವಾರ್ಗಿಯಾ ತೀವ್ರವಾಗಿ ಖಂಡಿಸಿದ್ದು, ಸಿನ್ಹಾ ಅವರನ್ನು ನಾಯಿಗೆ ಹೋಲಿಸಿದ್ದಾರೆ.

ಕಾರು ಚಲಿಸುವಾಗ, ನಾಯಿ ಕೂಡ ಅದರ ಕೆಳಗೆ ಚಲಿಸುತ್ತದೆ.ತನ್ನಿಂದಾಗಿ ಕಾರು ಚಲಿಸುತ್ತದೆ ಎಂದು ನಾಯಿ ತಿಳಿದುಕೊಳ್ಳುತ್ತದೆ. ಬಿಜೆಪಿ ಪಕ್ಷ ಒಬ್ಬ ವ್ಯಕ್ತಿಯನ್ನು ಅವಲಂಬಿಸಿಲ್ಲ. ಇದೊಂದು ಸಂಪೂರ್ಣ ಸಂಸ್ಥೆ. ಇಲ್ಲಿ ಕ್ರಮಬದ್ಧವಾಗಿ ಜವಾಬ್ದಾರಿಗಳನ್ನು ನೀಡಲಾಗುತ್ತದೆ.ಇಷ್ಟು ದಿನ ಮೌನವ್ರತ ನಡೆಸುತ್ತಿದ್ದವರು ಈಗ ಮಾತನಾಡಲು ಆರಂಭಿಸಿದ್ದಾರೆ ಎಂದು ವಿಜಯ್ ವಾರ್ಗಿಯಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT