ಹಿಮಪಾತ 
ದೇಶ

ಜಮ್ಮುವಿನಲ್ಲಿ ಹಿಮಪಾತ: ಭಾರತೀಯ ಸೇನಾ ಕ್ಯಾಪ್ಟನ್ ಸಾವು

ಜಮ್ಮು ಮತ್ತು ಕಾಶ್ಮೀರದ ಲಡಾಕ್ ಸೆಕ್ಟರ್​ನ ಸಿಯಾಚಿನ್ ಗ್ಲೇಸಿಯರ್​ನಲ್ಲಿ ಭಾರಿ ಹಿಮಪಾತವಾಗಿದ್ದು, ಹಿಮಪಾತಕ್ಕೆ ಸಿಲುಕಿ ಭಾರತೀಯ ಸೇನಾಪಡೆಯ ಕ್ಯಾಪ್ಟನ್ ಅಶ್ವಿನಿ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಲಡಾಕ್ ಸೆಕ್ಟರ್​ನ ಸಿಯಾಚಿನ್ ಗ್ಲೇಸಿಯರ್​ನಲ್ಲಿ ಭಾರಿ ಹಿಮಪಾತವಾಗಿದ್ದು, ಹಿಮಪಾತಕ್ಕೆ ಸಿಲುಕಿ ಭಾರತೀಯ ಸೇನಾಪಡೆಯ ಕ್ಯಾಪ್ಟನ್ ಅಶ್ವಿನಿ ಕುಮಾರ್ ಮೃತಪಟ್ಟಿದ್ದಾರೆ. 
ಸಿಯಾಚಿನ್ ಗ್ಲೇಸಿಯರ್​ನ ದಕ್ಷಿಣ ಭಾಗದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ಸೈನಿಕ ತುಕುಡಿ ಹಿಮಪಾತದಲ್ಲಿ ಸಿಲುಕಿಕೊಂಡಿತ್ತು. ಸೇನಾಪಡೆಯ ಯೋಧರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಹಿಮಪಾತದಲ್ಲಿ ಸಿಲುಕಿದ್ದ 15 ಯೋಧರನ್ನು ರಕ್ಷಿಸಲಾಗಿದೆ ಎಂದು ಸೇನಾಪಡೆಯ ವಕ್ತಾರ ಕರ್ನಲ್ ಎಸ್.ಡಿ.ಗೋಸ್ವಾಮಿ ತಿಳಿಸಿದ್ದಾರೆ.
ಕ್ಯಾಪ್ಟನ್ ಅಶ್ವಿನಿ ಕುಮಾರ್ ಅವರ ಸಾವಿಗೆ ಸೇನೆಯ ಉತ್ತರ ಕಮಾಂಡ್​ನ ಜನರಲ್ ಆಫೀಸರ್ ಇನ್ ಕಮಾಂಡ್ ಲೆಫ್ಟಿನೆಂಟ್ ಜನರಲ್ ಡಿ.ಎಸ್.ಹೂಡಾ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT