ವೆಂಕಯ್ಯನಾಯ್ಡು 
ದೇಶ

ಹತ್ತು ಲಕ್ಷ ಆದಾಯ ಇರುವವರಿಗೆ ಗ್ಯಾಸ್‌ ಸಬ್ಸಿಡಿ ಇಲ್ಲ: ವೆಂಕಯ್ಯ ನಾಯ್ಡು

ವಾರ್ಷಿಕವಾಗಿ 10 ಲಕ್ಷ ರೂಪಾಯಿ ಆದಾಯ ಹೊಂದಿರುವ ಬಳಕೆದಾರರಿಗೆ ಎಲ್‌ಪಿಜಿ ಸಿಲಿಂಡರ್‌ ಮೇಲಿನ ಸಬ್ಸಿಡಿ ನಿಲ್ಲಿಸಲು ಕೇಂದ್ರ ಸರಕಾರ ...

ಹೈದರಾಬಾದ್‌: ವಾರ್ಷಿಕವಾಗಿ 10 ಲಕ್ಷ ರೂಪಾಯಿ ಆದಾಯ ಹೊಂದಿರುವ ಬಳಕೆದಾರರಿಗೆ ಎಲ್‌ಪಿಜಿ ಸಿಲಿಂಡರ್‌ ಮೇಲಿನ ಸಬ್ಸಿಡಿ ನಿಲ್ಲಿಸಲು ಕೇಂದ್ರ ಸರಕಾರ ಆಲೋಚಿಸುತ್ತಿದೆ ಎಂದು ಕೇಂದ್ರ ಸಚಿವ ಎಂ ವೆಂಕಯ್ಯನಾಯ್ಡು ಹೇಳಿದ್ದಾರೆ.

"ಅಕ್ರಮ ಅಡುಗೆ ಅನಿಲ ಸಂಪರ್ಕಗಳನ್ನು ಪತ್ತೆ ಹಚ್ಚಿರುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಈ ಅಕ್ರಮ ಬಳಕೆದಾರರಿಗೆ ಸಹಾಯಧನವಿರುವ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯನ್ನು ನಿಲ್ಲಿಸಿದರೆ ಹಲವು ಸಾವಿರ ಕೋಟಿ ರೂ.ಗಳನ್ನು ಉಳಿಸಲು ಸಾಧ್ಯವಿದೆ' ಎಂದು ಸಚಿವ ನಾಯ್ಡು ತಿಳಿಸಿದರು.

10 ಲಕ್ಷಕ್ಕಿಂತ ಹೆಚ್ಚಿಗೆ ಆದಾಯ ಇರುವವರಿಗೆ ಯಾಕೆ ಸಬ್ಸಿಡಿ ಬೇಕು. ಜೊತೆಗೆ ಸಚಿವರಿಗೆ ಯಾಕೆ ಗ್ಯಾಸ್‌ ಸಬ್ಸಿಡಿ ಬೇಕು ? ಈ ತನಕ 30 ಲಕ್ಷ ಬಳಕೆದಾರರು ಗ್ಯಾಸ್‌ ಸಬ್ಸಿಡಿ ಬಿಟ್ಟುಕೊಟ್ಟಿದ್ದಾರೆ. ಆ ಸಬ್ಸಿಡಿಯನ್ನು ಬಡವರಿಗಾಗಿ ಬಳಸಲಾಗುವುದು ಎಂದು ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಚೇಂಬರ್‌ ಆಫ್ ಕಾಮರ್ಸ್‌ ಸಭೆಯಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT