ಓಲಾ ಬೋಟ್ ಸೇವೆ 
ದೇಶ

ಚೆನ್ನೈನಲ್ಲಿ ನಿರಾಶ್ರಿತರ ಸ್ಥಳಾಂತರಕ್ಕೆ ಓಲಾ ಬೋಟ್ ಸೇವೆ

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನ್ನೈ ದ್ವೀಪದಂತಾಗಿದ್ದು, ಜನರ ಅವಶ್ಯಕತೆಗಾಗಿ ಪ್ರಸಿದ್ದ ಓಲಾ ಸಂಸ್ಧೆ ಬೋಟ್ ಸೇವೆಯನ್ನು...

ಚೆನ್ನೈ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನ್ನೈ ದ್ವೀಪದಂತಾಗಿದ್ದು, ಜನರ ಅವಶ್ಯಕತೆಗಾಗಿ ಪ್ರಸಿದ್ದ ಓಲಾ ಸಂಸ್ಧೆ ಬೋಟ್ ಸೇವೆಯನ್ನು ಆರಂಭಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತಕ್ಕೆ ತಮಿಳುನಾಡು ಅಕ್ಷರಶ: ನಲುಗಿ ಹೋಗಿದೆ. ಚೆನ್ನೈ ಮತ್ತು ಕಾಂಚಿಪುರಂನಲ್ಲಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಈ ಮಧ್ಯೆ ಮೊಬೈಲ್ ಟ್ಯಾಕ್ಸಿ ಸೇವೆ ಪೂರೈಸುವ ಓಲಾ ಪ್ರವಾಹದಲ್ಲಿ ಸಿಲುಕಿರುವವರಿಗಾಗಿ ಓಲಾ ಬೋಟ್ ಸೇವೆ ಆರಂಭಿಸಿದ್ದು, ನಿರಾಶ್ರಿತರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿದೆ. 
ನೀರಿನಲ್ಲಿ ಮುಳುಗಡೆಯಾಗಿರುವ ಜನವಸತಿ ಪ್ರದೇಶಗಳಲ್ಲಿ ಸಂಚರಿಸುವ ಓಲಾ ಬೋಟ್ ಅಲ್ಲಿನ ಜನರಿಗೆ ನೀರು, ಆಹಾರ ಸೇವೆಯನ್ನು ಉಚಿತವಾಗಿ ಒದಗಿಸುತ್ತಿದೆ. ಈ ಬೋಟ್ ನಲ್ಲಿ ಇಬ್ಬರು ಅಂಬಿಗರಿದ್ದು ಅವರು ತೀರ ಅಪಾಯದಲ್ಲಿರುವ 5 ರಿಂದು 9 ಜನರನ್ನು ಒಂದು ಬಾರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ.
ಈ ಬೋಸ್ ಸೇವೆ ಇನ್ನು ಮೂರು ದಿನಗಳ ಕಾಲ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಜಲಾವೃತಗೊಂಡಿರುವ ಪ್ರದೇಶಗಳಲ್ಲಿ ಮುಂದುವರೆಸುವ ಯೋಜನೆಯನ್ನು ಸಂಸ್ಥೆ ಇಟ್ಟುಕೊಂಡಿದೆ. ಈ ಮಧ್ಯೆ ತಮಿಳುನಾಡಿನಲ್ಲಿ ತಮ್ಮ ಮೊಬೈಲ್ ಟ್ಯಾಕ್ಸಿ ಸೇವೆಯನ್ನು ಇನ್ನಷ್ಟು ಗಾಢಗೊಳಿಸುವ ನಿಟ್ಟಿನಲ್ಲಿ ಸಂಸ್ಥೆ ಈ ಸೇವೆ ಆರಂಭಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT