ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ (ಸಾಂದರ್ಭಿಕ ಚಿತ್ರ) 
ದೇಶ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಕಳೆದ ಹಲವು ದಿನಗಳಿಂದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬರುತ್ತಿರುವ ಪಾಕಿಸ್ತಾನ ಸೈನಿಕರು ಮಂಗಳವಾರ ಕೂಡ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಕಾಶ್ಮೀರದ...

ಜಮ್ಮು: ಕಳೆದ ಹಲವು ದಿನಗಳಿಂದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬರುತ್ತಿರುವ ಪಾಕಿಸ್ತಾನ ಸೈನಿಕರು ಮಂಗಳವಾರ ಕೂಡ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸೋಮವಾರ ತಡ ರಾತ್ರಿಯಿಂದ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ತಿಳಿದುಬಂದಿದೆ.

ಸಾಂಬಾ ವಲಯದ ಮುಂಚೂಣಿಯ ಭಾರತೀಯ ಹೊರ ಠಾಣೆಗಳನ್ನು ಗುರಿಯಾಗಿಸಿಟ್ಟುಕೊಂಡಿರುವ ಪಾಕಿಸ್ತಾನ ಸೇನಿಯು ಅಂತಾರಾಷ್ಟ್ರೀಯ ಗಡಿಯಲ್ಲಿ ಕಳೆದ ರಾತ್ರಿಯಿಂದಲೂ ಕದನ ವಿರಾಮವನ್ನು ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್ಎಫ್ ಅಧಿಕಾರಿ,  ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಯುತ್ತಿರುವುದಾಗಿ ಹಾಗೂ ಶಂಕಿತ ಚಲನವಲಗಳು ನಡೆಯುತ್ತಿರುವುದಾಗಿ ತಿಳಿಬಂದಿತು. ಹೀಗಾಗಿ ಭದ್ರತಾ ಪಡೆಗಳು ಪತ್ತೆಹಚ್ಚಲು ಕಾರ್ಯಾಚರಣೆಗಿಳಿದಿತ್ತು. ಆದರೆ. ಈ ವೇಳೆ ಯಾವುದೇ ವಿದ್ಯಾಮಾನಗಳು ಗೋಚರವಾಗಿರುವಂತೆ ತಿಳಿದುಬರಲಿಲ್ಲ. ದಾಳಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಗಡಿಯಲ್ಲಿ ಭಾರತೀಯ ಯೋಧರು ಕಣ್ಗಾವಲಿಸಿದ್ದಾರೆಂದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT