ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ (ಸಂಗ್ರಹ ಚಿತ್ರ) 
ದೇಶ

ಗೋ ಹತ್ಯೆ ಮಾಡುವವರಿಗೆ ಭಾರತದಲ್ಲಿ ಜೀವಿಸುವ ಹಕ್ಕು ಇಲ್ಲ: ಹರೀಶ್ ರಾವತ್

ಗೋವುಗಳನ್ನು ಹತ್ಯೆ ಮಾಡುವವರು ದೇಶದ ಬಹುದೊಡ್ಡ ಶತ್ರುಗಳಾಗಿದ್ದು, ಅವರಿಗೆ ಈ ದೇಶದಲ್ಲಿ...

ಹರಿದ್ವಾರ: ಗೋವುಗಳನ್ನು ಹತ್ಯೆ ಮಾಡುವವರು ದೇಶದ ಬಹುದೊಡ್ಡ ಶತ್ರುಗಳಾಗಿದ್ದು, ಅವರಿಗೆ ಈ ದೇಶದಲ್ಲಿ ಜೀವಿಸಲು ಹಕ್ಕು ಇಲ್ಲ ಎಂದು ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿಕೆ ನೀಡಿದ್ದಾರೆ.

ಹಸುಗಳನ್ನು ಸಾಯಿಸುವವರು ಯಾರೇ ಆಗಿರಲಿ, ಅವರು ಯಾವುದೇ ಸಮುದಾಯಕ್ಕೆ ಸೇರಿದವರಾಗಿರಲಿ ಅವರು ಈ ದೇಶದ ಬಹುದೊಡ್ಡ ಶತ್ರುಗಳಾಗಿರುತ್ತಾರೆ. ಅವರಿಗೆ ಭಾರತ ದೇಶದಲ್ಲಿ ಜೀವಿಸಲು ಅರ್ಹತೆಯಿರುವುದಿಲ್ಲ ಎಂದು ಹರಿದ್ವಾರದಲ್ಲಿ ಗೋಪಾಷ್ಠಮಿ ಕಾರ್ಯಕ್ರಮದ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡ ರಾಜ್ಯದಲ್ಲಿ ಗೋವುಗಳನ್ನು ಸಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗೋವುಗಳ ರಕ್ಷಣೆಗೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಗೋ ಹತ್ಯಾ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಪ್ರಸ್ತಾವನೆಯೊಂದನ್ನು ಜಾರಿಗೆ ತಂದಿದೆ. ಗೋವುಗಳನ್ನು ಸಾಕುವವರಿಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಸರ್ಕಾರ ಭೂಮಿ ಒದಗಿಸಿಕೊಡುತ್ತದೆ ಮತ್ತು ದನಗಳ ಮೇವಿಗೆ ವ್ಯವಸ್ಥೆ ಕಲ್ಪಿಸುತ್ತದೆ ಎಂದು ರಾವತ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT