ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ (ಸಂಗ್ರಹ ಚಿತ್ರ) 
ದೇಶ

ಗೋ ಹತ್ಯೆ ಮಾಡುವವರಿಗೆ ಭಾರತದಲ್ಲಿ ಜೀವಿಸುವ ಹಕ್ಕು ಇಲ್ಲ: ಹರೀಶ್ ರಾವತ್

ಗೋವುಗಳನ್ನು ಹತ್ಯೆ ಮಾಡುವವರು ದೇಶದ ಬಹುದೊಡ್ಡ ಶತ್ರುಗಳಾಗಿದ್ದು, ಅವರಿಗೆ ಈ ದೇಶದಲ್ಲಿ...

ಹರಿದ್ವಾರ: ಗೋವುಗಳನ್ನು ಹತ್ಯೆ ಮಾಡುವವರು ದೇಶದ ಬಹುದೊಡ್ಡ ಶತ್ರುಗಳಾಗಿದ್ದು, ಅವರಿಗೆ ಈ ದೇಶದಲ್ಲಿ ಜೀವಿಸಲು ಹಕ್ಕು ಇಲ್ಲ ಎಂದು ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿಕೆ ನೀಡಿದ್ದಾರೆ.

ಹಸುಗಳನ್ನು ಸಾಯಿಸುವವರು ಯಾರೇ ಆಗಿರಲಿ, ಅವರು ಯಾವುದೇ ಸಮುದಾಯಕ್ಕೆ ಸೇರಿದವರಾಗಿರಲಿ ಅವರು ಈ ದೇಶದ ಬಹುದೊಡ್ಡ ಶತ್ರುಗಳಾಗಿರುತ್ತಾರೆ. ಅವರಿಗೆ ಭಾರತ ದೇಶದಲ್ಲಿ ಜೀವಿಸಲು ಅರ್ಹತೆಯಿರುವುದಿಲ್ಲ ಎಂದು ಹರಿದ್ವಾರದಲ್ಲಿ ಗೋಪಾಷ್ಠಮಿ ಕಾರ್ಯಕ್ರಮದ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡ ರಾಜ್ಯದಲ್ಲಿ ಗೋವುಗಳನ್ನು ಸಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗೋವುಗಳ ರಕ್ಷಣೆಗೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಗೋ ಹತ್ಯಾ ನಿಷೇಧಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಪ್ರಸ್ತಾವನೆಯೊಂದನ್ನು ಜಾರಿಗೆ ತಂದಿದೆ. ಗೋವುಗಳನ್ನು ಸಾಕುವವರಿಗೆ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಸರ್ಕಾರ ಭೂಮಿ ಒದಗಿಸಿಕೊಡುತ್ತದೆ ಮತ್ತು ದನಗಳ ಮೇವಿಗೆ ವ್ಯವಸ್ಥೆ ಕಲ್ಪಿಸುತ್ತದೆ ಎಂದು ರಾವತ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT