2 .12 ಕೋಟಿ ಜಪ್ತಿ(ಸಂಗ್ರಹ ಚಿತ್ರ) 
ದೇಶ

ಭಯೋತ್ಪಾದಕರಿಗೆ ಹಣಕಾಸು ನೆರವು: ಭಾರತದಿಂದ 37 ಖಾತೆಗಳು ರದ್ದು, 2 .12 ಕೋಟಿ ಜಪ್ತಿ

ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪದಡಿ 37 ಸಂಸ್ಥೆಗಳು ಹಾಗೂ ಕೆಲವು ವಯಕ್ತಿಕ ಖಾತೆಗಳನ್ನು ರದ್ದುಗೊಳಿಸಿರುವ ಭಾರತ ಸರ್ಕಾರ 2 .12 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದೆ.

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಡಿ 37 ಸಂಸ್ಥೆಗಳು ಹಾಗೂ ಕೆಲವು ವಯಕ್ತಿಕ ಖಾತೆಗಳನ್ನು ರದ್ದುಗೊಳಿಸಿರುವ ಭಾರತ ಸರ್ಕಾರ 300 ,000 ಯುರೋಗಳನ್ನು( 2 .12 ) ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದೆ.   
ಹಣಕಾಸು ಕ್ರಿಯೆ ಕಾರ್ಯಪಡೆ(ಎಫ್ಎಟಿಎಫ್) ಗೆ ಭಾರತ ಸರ್ಕಾರ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಸಂಸ್ಥೆಗಳು ಹಾಗೂ ವಯಕ್ತಿಕ ಖಾತೆಗಳ ಬಗ್ಗೆ ಮಾಹಿತಿ ನೀಡಿತ್ತು. ಈ ಮಾಹಿತಿಯನ್ನು ಇತ್ತೀಚೆಗಷ್ಟೇ ನಡೆದ ಜಿ-20 ಶೃಂಗಸಭೆಯಲ್ಲಿ ಮಂಡಿಸಲಾಗಿತ್ತು. ಸಭೆಯಲ್ಲಿ ವರದಿ ಮಂಡನೆಯಾಗಿದೆಯಾದರೂ ಸಂಸ್ಥೆಗಳ ಹೆಸರು ಅಥವಾ ವಯಕ್ತಿಕ ಖಾತೆದಾರರ ಹೆಸರನ್ನು ಎಫ್ಎಟಿಎಫ್ ಬಹಿರಂಗಪಡಿಸಿರಲಿಲ್ಲ.  
2015 ರ ಆಗಸ್ಟ್ ವರೆಗೆ  ಭಾರತ ಸ್ಥಗಿತಗೊಳಿಸಿರುವ ಭಯೋತ್ಪಾದಕ ಸಂಘಟನೆಗಳಿಗೆ ಸರಬರಾಜಾಗುತ್ತಿದ್ದ ಹಣ ಹವಾಲಾ ಹಾಗೂ ನಕಲಿ ನೋಟುಗಳ ಚಲಾವಣೆಯಿಂದ ಬಂದ ಅಕ್ರಮ ಆದಾಯದ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.
ಹವಾಲಾ ಹಾಗೂ ನಕಲಿ ನೋಟುಗಳ ಚಲಾವಣೆಯಿಂದ ಬಂದ ಆದಾಯವನ್ನು ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ಜಮಾತ್-ಉದ್- ದವಾ ಸಂಘಟನೆ ಸೇರಿದಂತೆ ಹಲವು ಪಾಕಿಸ್ತಾನಿ ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪಾಕಿಸ್ತಾನ ಭಯೋತ್ಪಾದನೆ ಬಗ್ಗೆ ಸುಳ್ಳು ಹೇಳುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿರುವ ಎಫ್ಎಟಿಎಫ್ ವರದಿ, ನೆರೆ ರಾಷ್ಟ್ರ 117 ವ್ಯವಹಾರದ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ  22 ಲಕ್ಷಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದೆ. ಭಯೋತ್ಪಾದಕರು ಕಂಡುಕೊಳ್ಳುತ್ತಿರುವ  ಹೊಸ ಪಾವತಿ ವಿಧಾನಗಳು ಒಂದು ಉಗ್ರವಾದದ ವಿರುದ್ಧದ ಹೋರಾಟಕ್ಕೆ ಹೊಸ ಸವಾಲೊಡ್ಡುತ್ತಿದೆ ಎಂದೂ ಎಫ್ಎಟಿಎಫ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT