2 .12 ಕೋಟಿ ಜಪ್ತಿ(ಸಂಗ್ರಹ ಚಿತ್ರ) 
ದೇಶ

ಭಯೋತ್ಪಾದಕರಿಗೆ ಹಣಕಾಸು ನೆರವು: ಭಾರತದಿಂದ 37 ಖಾತೆಗಳು ರದ್ದು, 2 .12 ಕೋಟಿ ಜಪ್ತಿ

ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪದಡಿ 37 ಸಂಸ್ಥೆಗಳು ಹಾಗೂ ಕೆಲವು ವಯಕ್ತಿಕ ಖಾತೆಗಳನ್ನು ರದ್ದುಗೊಳಿಸಿರುವ ಭಾರತ ಸರ್ಕಾರ 2 .12 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದೆ.

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಡಿ 37 ಸಂಸ್ಥೆಗಳು ಹಾಗೂ ಕೆಲವು ವಯಕ್ತಿಕ ಖಾತೆಗಳನ್ನು ರದ್ದುಗೊಳಿಸಿರುವ ಭಾರತ ಸರ್ಕಾರ 300 ,000 ಯುರೋಗಳನ್ನು( 2 .12 ) ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದೆ.   
ಹಣಕಾಸು ಕ್ರಿಯೆ ಕಾರ್ಯಪಡೆ(ಎಫ್ಎಟಿಎಫ್) ಗೆ ಭಾರತ ಸರ್ಕಾರ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಸಂಸ್ಥೆಗಳು ಹಾಗೂ ವಯಕ್ತಿಕ ಖಾತೆಗಳ ಬಗ್ಗೆ ಮಾಹಿತಿ ನೀಡಿತ್ತು. ಈ ಮಾಹಿತಿಯನ್ನು ಇತ್ತೀಚೆಗಷ್ಟೇ ನಡೆದ ಜಿ-20 ಶೃಂಗಸಭೆಯಲ್ಲಿ ಮಂಡಿಸಲಾಗಿತ್ತು. ಸಭೆಯಲ್ಲಿ ವರದಿ ಮಂಡನೆಯಾಗಿದೆಯಾದರೂ ಸಂಸ್ಥೆಗಳ ಹೆಸರು ಅಥವಾ ವಯಕ್ತಿಕ ಖಾತೆದಾರರ ಹೆಸರನ್ನು ಎಫ್ಎಟಿಎಫ್ ಬಹಿರಂಗಪಡಿಸಿರಲಿಲ್ಲ.  
2015 ರ ಆಗಸ್ಟ್ ವರೆಗೆ  ಭಾರತ ಸ್ಥಗಿತಗೊಳಿಸಿರುವ ಭಯೋತ್ಪಾದಕ ಸಂಘಟನೆಗಳಿಗೆ ಸರಬರಾಜಾಗುತ್ತಿದ್ದ ಹಣ ಹವಾಲಾ ಹಾಗೂ ನಕಲಿ ನೋಟುಗಳ ಚಲಾವಣೆಯಿಂದ ಬಂದ ಅಕ್ರಮ ಆದಾಯದ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.
ಹವಾಲಾ ಹಾಗೂ ನಕಲಿ ನೋಟುಗಳ ಚಲಾವಣೆಯಿಂದ ಬಂದ ಆದಾಯವನ್ನು ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ಜಮಾತ್-ಉದ್- ದವಾ ಸಂಘಟನೆ ಸೇರಿದಂತೆ ಹಲವು ಪಾಕಿಸ್ತಾನಿ ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪಾಕಿಸ್ತಾನ ಭಯೋತ್ಪಾದನೆ ಬಗ್ಗೆ ಸುಳ್ಳು ಹೇಳುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿರುವ ಎಫ್ಎಟಿಎಫ್ ವರದಿ, ನೆರೆ ರಾಷ್ಟ್ರ 117 ವ್ಯವಹಾರದ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ  22 ಲಕ್ಷಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದೆ. ಭಯೋತ್ಪಾದಕರು ಕಂಡುಕೊಳ್ಳುತ್ತಿರುವ  ಹೊಸ ಪಾವತಿ ವಿಧಾನಗಳು ಒಂದು ಉಗ್ರವಾದದ ವಿರುದ್ಧದ ಹೋರಾಟಕ್ಕೆ ಹೊಸ ಸವಾಲೊಡ್ಡುತ್ತಿದೆ ಎಂದೂ ಎಫ್ಎಟಿಎಫ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT