ಶೀನಾ ಬೋರಾ - ಇಂದ್ರಾಣಿ ಮುಖರ್ಜಿ 
ದೇಶ

ಶೀನಾ ಕೇಸ್: ರಾಯ್‌ಗಢ ಪೊಲೀಸ್ ಕ್ರಮದ ಬಗ್ಗೆ ವರದಿ ಕೇಳಿದ ಮಹಾ ಸರ್ಕಾರ

ರಾಯ್‌ಗಢ ಪೊಲೀಸರು ಶೀನಾ ಬೋರಾ ಹತ್ಯೆ ಪ್ರಕರಣವನ್ನು ಆರಂಭಿಕ ಹಂತದಲ್ಲಿಯೇ ಮುಚ್ಚಿಹಾಕಲು ಯತ್ನಿಸಿದ ಆರೋಪದ...

ಮುಂಬೈ: ರಾಯ್‌ಗಢ ಪೊಲೀಸರು ಶೀನಾ ಬೋರಾ ಹತ್ಯೆ ಪ್ರಕರಣವನ್ನು ಆರಂಭಿಕ ಹಂತದಲ್ಲಿಯೇ ಮುಚ್ಚಿಹಾಕಲು ಯತ್ನಿಸಿದ ಆರೋಪದ ಬಗ್ಗೆ ಹೊಸದಾಗಿ ವರದಿ ನೀಡುವಂತೆ ಮಹಾರಾಷ್ಟ್ರ ಸರ್ಕಾರ, ಪೊಲೀಸ್ ಮಹಾನಿರ್ದೇಶಕರಿಗೆ ಶನಿವಾರ ಸೂಚಿಸಿದೆ.

ಆರೋಪದ ಬಗ್ಗೆ ಈ ಹಿಂದೆ ಡಿಜಿಪಿಯಾಗಿದ್ದ ಸಂಜೀವ್‌ ದಯಾಳ್‌ ಅವರು ಸಲ್ಲಿಸಿದ್ದ ಒಂದು ಪುಟದ ವರದಿಯಿಂದ ಸಮಾಧಾನಗೊಳ್ಳದ ರಾಜ್ಯ ಗೃಹ ಇಲಾಖೆ, ಇಂದು ಹೊಸದಾಗಿ ವರದಿ ಸಲ್ಲಿಸುವಂತೆ ಡಿಜಿಪಿ ಪ್ರವೀಣ್‌ ದೀಕ್ಷಿತ್‌ ಅವರಿಗೆ ಸೂಚಿಸಿದೆ.

2012ರ ಮೇ 23ರಂದು ರಾಯ್‌ಗಢ ಅರಣ್ಯ ಪ್ರದೇಶದಲ್ಲಿ ಶೀನಾ ಬೋರಾ ಶವ ಪತ್ತೆಯಾಗಿತ್ತು. ಈ ಬಗ್ಗೆ ರಾಯ್‌ಗಢ ಪೊಲೀಸರು ಎಫ್‌ಐಆರ್‌ ಅಥವಾ ಎಡಿಆರ್‌ (ಆಕ್ಸಿಡೆಂಟಲ್‌ ಡೆತ್‌ ರಿಪೋರ್ಟ್‌) ಏಕೆ ದಾಖಲಿಸಲಿಲ್ಲ ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಈ ಹಿಂದಿನ ಡಿಜಿಪಿ ಒಂದು ಪುಟದ ವರದಿ ಸಲ್ಲಿಸಿದ್ದರು. ಅದು ಸಮಾಧಾನಕರವಾಗಿಲ್ಲ. ಹೀಗಾಗಿ 15 ದಿನಗಳೊಳಗೆ ಹೊಸದಾಗಿ ವರದಿ ಸಲ್ಲಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಕೆ.ಪಿ. ಬಕ್ಷಿ ತಿಳಿಸಿದ್ದಾರೆ.

ಇನ್ನು ಪ್ರಕರಣ ಮುಚ್ಚಿಹಾಕುವ ಯತ್ನದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರ ಪಾತ್ರವಿದೆ ಎಂಬ ಮಾಧ್ಯಮಗಳ ವರದಿಯನ್ನು ಅಲ್ಲಗಳೆದ ಅವರು, ಆರೋಪವಿರುವ ಹಿರಿಯ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ಹೆಚ್ಚಿನ ದಾಖಲೆಗಳ ಅಗತ್ಯವಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT