ಏಳನೇ ವೇತನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ.ಮಾಥುರ್ (ಸಂಗ್ರಹ ಚಿತ್ರ) 
ದೇಶ

ವೇತನ ಆಯೋಗ ಕೊನೆಯಾಗಲಿ

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗಗಳನ್ನು ರಚಿಸುವುದನ್ನು ಸ್ಥಗಿತಗೊಳಿಸಬೇಕೆಂದು ಏಳನೇ ವೇತನ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎ.ಕೆ.ಮಾಥುರ್ ಹೇಳಿದ್ದಾರೆ...

ನವದೆಹಲಿ: ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗಗಳನ್ನು ರಚಿಸುವುದನ್ನು ಸ್ಥಗಿತಗೊಳಿಸಬೇಕೆಂದು ಏಳನೇ ವೇತನ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎ.ಕೆ.ಮಾಥುರ್ ಹೇಳಿದ್ದಾರೆ.

ಖಾಸಗಿ ವಲಯದಲ್ಲಿ ಪ್ರತಿ ವರ್ಷ ಮಾಡುವಂತೆ ಸರ್ಕಾರಿ ನೌಕರರ ವೇತನವನ್ನೂ ಏಕೆ ಪರಿಷ್ಕರಿಸಬಾರದು ಎಂದು ಪ್ರಶ್ನಿಸಿದ್ದಾರೆ. ವೇತನ ಆಯೋಗ ರಚಿಸುವುದು ಮತ್ತು ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವುದು ಉತ್ತಮ ಮಾನವ ಸಂಪನ್ಮೂಲ ನಿಯಮಗಳಿಗೆ ಅನುಸಾರವಾಗಿ ವೇತನ ನಿಗದಿಪಡಿಸುವುದಕ್ಕಿಂತಲೂ ಹೆಚ್ಚು ರಾಜಕೀಕರಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2014ರಲ್ಲಿ ಲೋಕಸಭಾ ಚುನಾವಣೆಗಳು ಮುಂದಿರುವಾಗ ಆಗಿನ ಯುಪಿಎ ಸರ್ಕಾರ ಏಳನೇ ವೇತನ ಆಯೋಗವನ್ನು ರಚಿಸಿತ್ತು. ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಮಾಡುವುದು ತಾರ್ಕಿಕವಾಗಿ ಸರಿಯಲ್ಲ ಎಂದು ಆಯೋಗದ ಸಹಯೋಗದಲ್ಲಿರುವ ಹಲವಾರು ಸಂಸ್ಥೆಗಳು ಹೇಳಿರುವ ನಡುವೆ ಈ ವೇತನ ಏರಿಕೆ ಬೊಕ್ಕಸಕ್ಕೆ ಭಾರಿ ಹೊರೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT