ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ 
ದೇಶ

ಪ್ರಧಾನಿಯವರನ್ನು ಹಾಡಿ ಹೊಗಳಿದ ಆಡ್ವಾಣಿ

ಬಿಹಾರ ವಿಧಾನಸಭೆ ಚುನಾವಣೆ ಸೋಲನ್ನು ಮರೆತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮನಸಾರೆ ಶ್ಲಾಘಿಸಿರುವ ಬಿಜೆಪಿ...

ಅಹಮದಾಬಾದ್: ಬಿಹಾರ ವಿಧಾನಸಭೆ ಚುನಾವಣೆ ಸೋಲನ್ನು ಮರೆತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮನಸಾರೆ ಶ್ಲಾಘಿಸಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಗುಜರಾತ್ ನ ಎಲ್ಲಾ ಆರು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದಂತೆ ಗುಜರಾತ್ ನ ನಗರ ಪಾಲಿಕೆ ಚುನಾವಣೆಯಲ್ಲಿ ಕೂಡ ಗೆಲ್ಲುತ್ತದೆ ಎಂದು ಅಹಮದಾಬಾದ್ ನಲ್ಲಿ ಹೇಳಿಕೆ ನೀಡಿದ್ದಾರೆ.
ಗುಜರಾತ್ ನ ಆರು ನಗರ ಪಾಲಿಕೆಗಳಾದ ಅಹಮದಾಬಾದ್, ಸೂರತ್, ರಾಜ್ ಕೋಟ್, ವಡೋದರಾ, ಜಮ್ನಗರ್ ಮತ್ತು ಭಾವನಗರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತವೆ.
ಇಂದಿನ ಚುನಾವಣೆ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಪಾಟೀದಾರ್ ಸಮಾಜದ ಪ್ರತಿಭಟನೆ ಮೇಲೆಯೂ ಈ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ.

ಬಿಹಾರ ವಿಧಾನಸಭೆ ಚುನಾವಣೆ ಮುಗಿದ ನಂತರ ನಡೆಯುತ್ತಿರುವ ಚುನಾವಣೆಯಾಗಿದೆ. ಬಿಹಾರದಲ್ಲಿ ಪಕ್ಷ ಸೋತ ನಂತರ ಬಿಜೆಪಿಯ ನಾಲ್ವರು ಹಿರಿಯ ನಾಯಕರು ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿಯ ನಾಯಕತ್ವ ಸರಿಯಾಗಿ ನಡೆದುಕೊಂಡು ಹೋಗುತ್ತಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT