ಶೀನಾ ಬೋರಾ (ಸಂಗ್ರಹ ಚಿತ್ರ) 
ದೇಶ

ರಾಯಗಡ ಪೊಲೀಸರ ಮೇಲೆ ಮಹಾರಾಷ್ಟ್ರ ಸರ್ಕಾರದ ಕಣ್ಣು

ಶೀನಾ ಬೋರಾ ಹತ್ಯೆ ಪ್ರಕರಣವನ್ನು ಪೊಲೀಸರು ಬೇಕಂತಲೇ ಮುಚ್ಚಿಟ್ಟಿದ್ದರೇ ಎಂಬ ಅನುಮಾನಗಳು ಮೂಡಿರುವ ಬೆನ್ನಲ್ಲೇ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರ...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣವನ್ನು ಪೊಲೀಸರು ಬೇಕಂತಲೇ ಮುಚ್ಚಿಟ್ಟಿದ್ದರೇ ಎಂಬ ಅನುಮಾನಗಳು ಮೂಡಿರುವ ಬೆನ್ನಲ್ಲೇ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರ ಮಾಹಿತಿ ಕೋರಿದೆ.

ಶೀನಾಳ ಮೃತದೇಹ ಪತ್ತೆಯಾದ ಬಳಿಕವೂ ರಾಯಗಡ ಪೊಲೀಸರು ಎಫ್ಐಆರ್ ಏಕೆ ದಾಖಲಿಸಿಲ್ಲ, ಆಕಸ್ಮಿಕ ಸಾವಿನ ವರದಿ (ಎಡಿಆರ್) ಏಕೆ ಸಲ್ಲಿಸಿಲ್ಲ ಎಂಬೆಲ್ಲ ಪ್ರಶ್ನೆಗಳಿಗೂ ಉತ್ತರಿಸಿ, 15 ದಿನಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಡಿಜಿಪಿಗೆ ಸರ್ಕಾರ ಆದೇಶಿಸಿದೆ. ಮಾಜಿ ಡಿಜಿಪಿ ಸಂಜೀವ್ ದಯಾಳ್ ರಾಯಗಡ ಪೊಲೀಸರ ವಿರುದ್ಧ ಕೈಗೊಂಡ ಕ್ರಮಕ್ಕೆ ಸಂಬಂಧಿಸಿ ಒಂದು ಪುಟದ ವರದಿ ಸಲ್ಲಿಸಿದ್ದಾರೆ. ಆದರೆ, ಅದು ತೃಪ್ತಿದಾಯಕ ವಾಗಿಲ್ಲ. ಅದಕ್ಕಾಗಿ, ಹೊಸದಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಕೆ ಪಿ ಬಕ್ಷಿ ತಿಳಿಸಿದ್ದಾರೆ.

ಇದೇ ವೇಳೆ, ಶೀನಾ ಪ್ರಕರಣ ತನಿಖೆ ವಿಳಂಬವಾ ಗುವುದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಕೈವಾಡವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಬಕ್ಷಿ, ಈ ಬಗ್ಗೆ ಸಿಬಿಐನಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ ಎಂದಿದ್ದಾರೆ. ಈ ನಡುವೆ, ಗುರುವಾರ ಬಂಧಿತರಾದ ಪೀಟರ್ ಮುಖರ್ಜಿ ಅವರನ್ನು ಭಾನುವಾರವೂ ಸಿಬಿಐ ವಿಚಾರಣೆ ನಡೆಸಿದೆ. ಇದೇ ವೇಳೆ, `ತನ್ನ ಅಪ್ಪನ ವಿರುದ್ಧ ಹೊರಿಸಲಾದ ಆರೋಪಗಳೆಲ್ಲ ಸುಳ್ಳು' ಎಂದು ಪೀಟರ್ ಪುತ್ರ ರಾಹುಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT