ಸಂಗ್ರಹ ಚಿತ್ರ 
ದೇಶ

ಜನನ ಪ್ರಮಾಣಪತ್ರದಲ್ಲೇ ಜಾತಿ ನಮೂದಿಗೆ ಪ್ರಸ್ತಾಪ

ದಲಿತ ಸಮುದಾಯದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸುವಾಗ ಎದುರಿಸುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು...

ನವದೆಹಲಿ: ದಲಿತ ಸಮುದಾಯದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸುವಾಗ ಎದುರಿಸುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಜಾತಿ ಮತ್ತು ವಾಸ ಪ್ರಮಾಣ ಪತ್ರ ಸುಲಭವಾಗಿ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಹೊಸ ಚಿಂತನೆ ನಡೆಸಿದೆ. ಇನ್ನು ಮುಂದೆ ದಲಿತ ಮಕ್ಕಳ ಜನನ ಪ್ರಮಾಣ ಪತ್ರದಲ್ಲೇ ಜಾತಿಯನ್ನು ನಮೂದಿಸುವ ನಿರ್ಧಾರಕ್ಕೆ ಬಂದಿದೆ. 
ಈ ಸಂಬಂಧ ಹೊಸ ನಿಯಮಾವಳಿ ರೂಪಿಸಲು ಕೇಂದ್ರ ಸರ್ಕಾರ ಎಲ್ಲ ಕೇಂದ್ರಾಡಳಿತ ಮತ್ತು ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿ ಸುತ್ತೋಲೆ ಹೊರಡಿಸಿದೆ. ಹೊಸ ನಿಯಮಾವಳಿ ಜಾರಿಯಾದರೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಶಾಲೆಗಳೇ ಎಸ್ಸಿ ಮತ್ತು ಎಸ್ಟಿ ಮಕ್ಕಳು ಎಂಟನೇ ತರಗತಿಯಲ್ಲಿರುವಾಗಲೇ ಜಾತಿ ಹಾಗೂ ವಾಸ ಸ್ಥಾನ ದೃಢೀಕರಣ ಪತ್ರ ನೀಡಬೇಕಿದೆ. 
ಕೇಂದ್ರ ಸರ್ಕಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಎಸ್ಸಿ, ಎಸ್ಟಿ ವಿದ್ಯಾರ್ಥಿಗಲು ಜಾತಿ ಹಾಗೂ ಅವಾಸಸ್ಥಾನ ಪ್ರಮಾಣ ಪತ್ರ ಪಡೆಯಲು ತೀವ್ರ ತೊಂದರೆ ಎದುರಿಸುತ್ತಾರೆ. ಈ ಸಂಬಂಧ ಸರ್ಕಾರಕ್ಕೆ ಆಗಾಗ ದೂರುಗಳು ಸಲ್ಲಿಕೆಯಾಗುತ್ತಲೇ ಬಂದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಂಥದ್ದೊಂದು ಚಿಂತನೆ ನಡೆಸಿದೆ. 
ಈ ಹೊಸ ಕರಡು ನಿಯಮಾವಳಿಯಂತೆ ಆಯಾ ಶಾಲೆಯ ಪ್ರಾಂಶುಪಾಲರೇ ಮಕ್ಕಳಿಂದ ಅರ್ಜಿಯನ್ನು ಸ್ವೀಕರಿಸಿ ಎಂಟನೇ ತರಗತಿಯಲ್ಲೇ ಜಾತಿ ಹಾಗೂ ವಾಸಸ್ಥಳ ದಢೀಕರಣ ಪತ್ರ ನೀಡುವಂತೆ ಮಾಡುವುದು ಕೇಂದ್ರದ ಉದ್ದೇಶ. ಶಾಲೆಯಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿ ಸರ್ಕಾರಗಳು ಪ್ರಮಾಣಪತ್ರವನ್ನು ನೀಡಬೇಕು. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳು ಅಥವಾ ಇತರೆ ಯಾವುದೇ ಕಾಲಮಿತಿಯೊಳಗೆ ಪ್ರಮಾಣ ಪತ್ರ ನೀಡುವ ಕಾರ್ಯ ಮುಗಿಸಬೇಕು. ನಂತರ ಅದನ್ನು ಶಾಲೆಯ ಮೂಲಕವೇ ಮಕ್ಕಳಿಗೆ ವಿತರಿಸಬೇಕು ಎಂದು ನಿಯಮಾವಳಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT