ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದ ಪಟೇಲ್ ಸಮುದಾಯ 
ದೇಶ

ಪಟೇಲರಿಗೆ ಮೀಸಲಾತಿ ನಿರಾಕರಿಸಿದ ಗುಜರಾತ್ ಮುಖ್ಯಮಂತ್ರಿ

ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್

ರಾಜ್ಕೋಟ್: ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್ ಸೋಮವಾರ ಘೋಷಿಸಿದ್ದಾರೆ.

ಆರು ಪುರಸಭೆಗಳಲ್ಲಿನ ಚುನಾವಣೆಗಳ ಮೊದಲ ಹಂತದ ಚುನಾವಣೆಯ ನಂತರ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಟೇಲ್ ಸಮುದಾಯ ನಾಯಕರು ಹಾರ್ದಿಕ್ ಪಟೇಲ್ ನಾಯಕತ್ವದಲ್ಲಿ ನಾಲ್ಕು ತಿಂಗಳುಗಳಿಂದ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಹಾರ್ದಿಕ್ ಪಟೇಲ್ ಅವರ ವಿರುದ್ಧ ದೇಶದ್ರೋಹದ ಆರೋಪ ಮಾಡಿ ಗುಜರಾತ್ ಸರ್ಕಾರ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿರ್ಧಿಷ್ಟವಾಗಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿರುವುದು. "ಕೆಲವ ೫% ಪಟೇಲ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿದ್ದಾರೆ. ಅವರಿಗೆ ಮೀಸಲಾತಿ ನೀಡುವ ಪ್ರಶ್ನೆಯೇ ಇಲ್ಲ. ಉಳಿದ ಸಮುದಾಯಗಳು ನರಳಲು ನಾವು ಅವಕಾಶ ನೀಡುವುದಿಲ್ಲ" ಎಂದು ಆನಂದಿಬೇನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT