ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದ ಪಟೇಲ್ ಸಮುದಾಯ 
ದೇಶ

ಪಟೇಲರಿಗೆ ಮೀಸಲಾತಿ ನಿರಾಕರಿಸಿದ ಗುಜರಾತ್ ಮುಖ್ಯಮಂತ್ರಿ

ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್

ರಾಜ್ಕೋಟ್: ನೌಕರಿಗಳಲ್ಲಿ ಮತ್ತು ಶಿಕ್ಷಣಸಂಸ್ಥೆಗಳಲ್ಲಿ ಪಟೇಲ್ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೃಷ್ಟಿಸುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೇನ್ ಪಟೇಲ್ ಸೋಮವಾರ ಘೋಷಿಸಿದ್ದಾರೆ.

ಆರು ಪುರಸಭೆಗಳಲ್ಲಿನ ಚುನಾವಣೆಗಳ ಮೊದಲ ಹಂತದ ಚುನಾವಣೆಯ ನಂತರ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಟೇಲ್ ಸಮುದಾಯ ನಾಯಕರು ಹಾರ್ದಿಕ್ ಪಟೇಲ್ ನಾಯಕತ್ವದಲ್ಲಿ ನಾಲ್ಕು ತಿಂಗಳುಗಳಿಂದ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಹಾರ್ದಿಕ್ ಪಟೇಲ್ ಅವರ ವಿರುದ್ಧ ದೇಶದ್ರೋಹದ ಆರೋಪ ಮಾಡಿ ಗುಜರಾತ್ ಸರ್ಕಾರ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿರ್ಧಿಷ್ಟವಾಗಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನಿರಾಕರಿಸಿರುವುದು. "ಕೆಲವ ೫% ಪಟೇಲ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿದ್ದಾರೆ. ಅವರಿಗೆ ಮೀಸಲಾತಿ ನೀಡುವ ಪ್ರಶ್ನೆಯೇ ಇಲ್ಲ. ಉಳಿದ ಸಮುದಾಯಗಳು ನರಳಲು ನಾವು ಅವಕಾಶ ನೀಡುವುದಿಲ್ಲ" ಎಂದು ಆನಂದಿಬೇನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT