ಮಮತಾ ಬ್ಯಾನರ್ಜಿ 
ದೇಶ

ಪ್ರವಾಹ ಪರಿಹಾರದಲ್ಲಿ ಕೇಂದ್ರ ದ್ವಿಮುಖ ನೀತಿ ಅನುಸರಿಸುತ್ತಿದೆ: ಮಮತಾ

ರಾಜ್ಯಗಳಿಗೆ ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಪಶ್ಚಿಮ ಬಂಗಾಳ...

ಅರಂಬಾಘ್: ರಾಜ್ಯಗಳಿಗೆ ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಪ್ರವಾಹ ಪರಿಹಾರ ಅಂದಾಜು ಮಾಡಲು ಕೇಂದ್ರದ ಉನ್ನತ ತಂಡ ಆಗಮಿಸಿದ ನಂತರವೂ ರಾಜ್ಯಕ್ಕೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಎಂಟು ತಿಂಗಳ ಸಮಯ ತೆಗೆದುಕೊಂಡಿತು. ಆದರೆ ತಮಿಳುನಾಡಿಗೆ ಕೇವಲ 7 ದಿನಗಳಲ್ಲಿ ಪರಿಹಾರ ನೀಡಲಾಯಿತು ಎಂದು ಮಮತಾ ಅಸಮಾಧಾನ ವ್ಯಕ್ತಪಡಿಸಿದರು.

ಹೂಗ್ಲಿ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, 'ನಿಮಗೆ ತಮಿಳುನಾಡು ತುಂಬಾ ಆಪ್ತ, ಪಶ್ಚಿಮ ಬಂಗಾಳ ಅಲ್ಲವೇ? ಎಂದು ಪ್ರಶ್ನಿಸಿದರು. ಅಲ್ಲದೆ ಕೇಂದ್ರ ಸರ್ಕಾರ ರಾಜಕೀಯ ಬಿಟ್ಟು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು' ಎಂದರು.

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯ ನಡುವೆಯೂ ರಾಜ್ಯ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಡಬಲ್ ಮರ್ಡರ್; ಅಪ್ರಾಪ್ತನಿಂದ ಇಬ್ಬರ ಹತ್ಯೆ!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

SCROLL FOR NEXT