ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್ 
ದೇಶ

ಗೋವಾ ತೇಜೋವಧನೆಗೆ ಸಿವಿಲ್ ಸೊಸೈಟಿ ಕಾರ್ಯಕರ್ತರಿಂದ ಸಾಮಾಜಿಕ ಜಾಲತಾಣ ಬಳಕೆ: ಗೋವಾ ಸಿಎಂ

ಗೋವಾದ ಕ್ಯಾಥೊಲಿಕ್ ಪಾದ್ರಿ ನಿಗೂಢ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಆಗ್ರಹಿಸಿ ಕೈಗೊಂಡಿರುವ ಅಭಿಯಾನವನ್ನು ಮುಂದಿಟ್ಟುಕೊಂಡು ಗೋವಾದ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ

ಪಣಜಿ: ಗೋವಾದ ಕ್ಯಾಥೊಲಿಕ್ ಪಾದ್ರಿ ನಿಗೂಢ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಆಗ್ರಹಿಸಿ ಕೈಗೊಂಡಿರುವ ಅಭಿಯಾನವನ್ನು ಮುಂದಿಟ್ಟುಕೊಂಡು, ಸಿವಿಲ್ ಸೊಸೈಟಿ ಕಾರ್ಯಕರ್ತರು ಗೋವಾದ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಹೇಳಿದ್ದಾರೆ.
ಬಿಸ್ಮಾರ್ಕ್ ಡಯಾಸ್ ಸಾವಿನ ಪ್ರಕರಣಕ್ಕೆ ನ್ಯಾಯ ಕೇಳುತ್ತಿರುವ ಕಾರ್ಯಕರ್ತರು, ಗೋವಾದ ತೇಜೋವಧೆ ಮಾಡಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಇಂಡಿಯನ್ ಸೂಪರ್ ಲೀಗ್ ಪಂದ್ಯಗಳನ್ನು ಸಹ ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. 
ನವೆಂಬರ್.07 ರಂದು ಕ್ಯಾಥೋಲಿಕ್ ಪಾದ್ರಿ ಬಿಸ್ಮಾರ್ಕ್ ಅವರ ಮೃತ ದೇಹ ಮಾಂಡೋವಿ ನದಿಯಲ್ಲಿ ಪತ್ತೆಯಾಗಿತ್ತು. ಗೋವಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಐಎಸ್ಎಲ್ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅಭಿಯಾನ ಕೈಗೊಳ್ಳುವುದರಿಂದ ಅಂತಾರಾಷ್ಟ್ರೀಯ ಸುದ್ದಿಯಾಗಿ ಗೋವಾದ ತೇಜೋವಧೆಗೆ ಕಾರಣವಾಗುತ್ತದೆ ಎಂದು ಲಕ್ಷ್ಮಿಕಾಂತ್ ಪರ್ಸೇಕರ್ ಹೇಳಿದ್ದಾರೆ.
ನಿಗೂಢವಾಗಿ ಮೃತಪಟ್ಟಿರುವ ಬಿಸ್ಮಾರ್ಕ್ ಅವರ ಬಗ್ಗೆ  ನನಗೆ ಸಹಾನುಭೂತಿ ಇದೆ. ಸಾಮಾಜಿಕ ಜಾಲತಾಣಗಳ ಮೂಲಕ ಜನಸಂದಣಿಯನ್ನು ಸೆಳೆಯಲು ಸೆಕ್ಷನ್ 144 (ಸಿ.ಆರ್.ಪಿ.ಸಿ) ಯನ್ನು ಧಿಕ್ಕರಿಸುವುದು ಎಷ್ಟು ಸರಿ ಎಂದು ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಶ್ನಿಸಿದ್ದಾರೆ.  ಬಿಸ್ಮಾರ್ಕ್ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪಣಜಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 100 ಜನರನ್ನು ಬಂಧಿಸಲಾಗಿತ್ತು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿರುವ ಪ್ರದೇಶದಿಂದ 100 ಮೀಟರ್ ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆದಿದರ ಹಿನ್ನೆಲೆಯಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT