ಆಂಧ್ರಪ್ರದೇಶ ಮಾಜಿ ಪೋಲೀಸ್ ಮಹಾ ನಿರ್ದೇಶಕ ಪೆರ್ವಾರಂ ರಾಮುಲು (ಸಂಗ್ರಹ ಚಿತ್ರ) 
ದೇಶ

ಹೈದರಾಬಾದ್'ನಲ್ಲಿ ಅಪಘಾತ: ಮೂವರು ಸಾವು

ಹೈದರಾಬಾದ್'ನ ರಾಜೇಂದ್ರ ನಗರದಲ್ಲಿ ಅಪಘಾತವೊಂದು ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ...

ಹೈದರಾಬಾದ್: ಹೈದರಾಬಾದ್'ನ ರಾಜೇಂದ್ರ ನಗರದಲ್ಲಿ ಅಪಘಾತವೊಂದು ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಸಾವನ್ನಪ್ಪಿರುವ ಮೂವರಲ್ಲಿ ಓರ್ವ ಆಂಧ್ರಪ್ರದೇಶದ ಮಾಜಿ ಪೋಲೀಸ್ ಮಹಾ ನಿರ್ದೇಶಕರಾಗಿದ್ದ ಹಾಗೂ ಪ್ರಸ್ತುತ ತೆಲಂಗಾಣ ಸರ್ಕಾರದ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಪೆರ್ವಾರಂ ರಾಮುಲು ಅವರ ಮೊಮ್ಮಗನಾದ ವರುಣ್ ಪವಾರ್ (20) ಎಂದು ಹೇಳಲಾಗುತ್ತಿದೆ.

ಕಾರಿನಲ್ಲಿ ಮಾಜಿ ಡಿಜಿಪಿ ಮೊಮ್ಮಗ ಸೇರಿದಂತೆ ನಾಲ್ವರಿದ್ದರು ಎಂದು ಹೇಳಲಾಗುತ್ತಿದ್ದು, ದುರಂತಕ್ಕೆ ವೇಗದ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅತೀ ವೇಗವಾಗಿ ಬರುತ್ತಿದ್ದ ಕಾರು ಇದ್ದಕ್ಕಿದ್ದಂತೆ ಹಾಲಿನ ಟ್ಯಾಂಕರ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯೊಂದಕ್ಕೆ ಆತನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಗಾಯಗೊಂಡವನ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT