ಅಮಿರ್ ಖಾನ್ (ಸಂಗ್ರಹ ಚಿತ್ರ) 
ದೇಶ

ಮರೆಯದಿರಿ 'ಪಿಕೆ' ಬ್ಲಾಕ್ ಬಸ್ಟರ್ ಆಗುವಂತೆ ಮಾಡಿತ್ತು ಭಾರತ: ಸತೀಶ್ ಗೌತಮ್

'ಪಿಕೆ' ಚಿತ್ರ ಬ್ಲಾಕ್ ಬಸ್ಟರ್ ಆಗುವಂತೆ ಮಾಡಿತು ಭಾರತ. ಸಹಿಷ್ಣುತೆ ಎಂದರೆ ಇದು. ಇದನ್ನು ಅಮಿರ್ ಖಾನ್ ಯಾವಾಗಲೂ ನೆನಪಿಸಿಕೊಳ್ಳಬೇಕೆಂದು ಬಿಜೆಪಿ ಶಾಸಕ ಸತೀಶ್ ಗೌತಮ್ ಬುಧವಾರ ಹೇಳಿದ್ದಾರೆ...

ನವದೆಹಲಿ: 'ಪಿಕೆ' ಚಿತ್ರ ಬ್ಲಾಕ್ ಬಸ್ಟರ್ ಆಗುವಂತೆ ಮಾಡಿತು ಭಾರತ. ಸಹಿಷ್ಣುತೆ ಎಂದರೆ ಇದು. ಇದನ್ನು ಅಮಿರ್ ಖಾನ್ ಯಾವಾಗಲೂ ನೆನಪಿಸಿಕೊಳ್ಳಬೇಕೆಂದು ಬಿಜೆಪಿ ಶಾಸಕ ಸತೀಶ್ ಗೌತಮ್ ಬುಧವಾರ ಹೇಳಿದ್ದಾರೆ.

ನಟ ಅಮಿರ್ ಅಸಹಿಷ್ಣುತೆ ಕುರಿತಂತೆ ನೀಡಿದ್ದ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪಿಕೆ ಚಿತ್ರದಲ್ಲಿ ಹಿಂದೂ ದೇವತೆಗಳನ್ನ ಅವಹೇಳನ ಮಾಡಲಾಗಿತ್ತು. ಆದರೂ ಜನರು ಚಿತ್ರವನ್ನು ನೋಡಿದ್ದರು. ನೋಡಿದ್ದೇ ಆಲ್ಲ ಚಿತ್ರ ಬ್ಲಾಕ್ ಬಸ್ಟರ್ ಆಗುವಂತೆ ಮಾಡಿದ್ದರು. ಇದೊಂದೇ ಸಾಕು ಭಾರತದಲ್ಲಿ ಸಹಿಷ್ಣುತೆ ಎಂದು ಹೇಳಲು. ಭಾರತದಲ್ಲಿರುವ ಪ್ರತಿಯೊಬ್ಬರಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.

ಇದೇ ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿರುವ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ದೇಶವನ್ನು ಅಗೌರವದಿಂದ ಕಾಣುವ ಅಮಿರ್ ಖಾನ್ ರಂತಹ ಜನರನ್ನು ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಬಿಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT