ಮಳೆ ನೀರಿನಿಂದಾವೃತವಾದ ದೇವಾಲಯದ ರಸ್ತೆ 
ದೇಶ

ತಿರುಪತಿಯಲ್ಲಿ ತಗ್ಗಿದ ಮಳೆಯಬ್ಬರ

ಅತೀವ ಮಳೆಯಿಂದ ಕಂಗೆಟ್ಟಿದ್ದ ತಿರುಪತಿಯಲ್ಲಿ ಮಂಗಳವಾರ ಪರಿಸ್ಥಿತಿ ಸುಧಾರಿಸಿದೆ. 3 ದಿನಗಳ ಕಾಲ ಮಳೆ ಸುರಿದು ಆತಂಕಕ್ಕೀಡಾಗಿದ್ದ ಭಕ್ತರು ನೆಮ್ಮದಿಯ...

ಚೆನ್ನೈ/ತಿರುಪತಿ:  ಅತೀವ ಮಳೆಯಿಂದ ಕಂಗೆಟ್ಟಿದ್ದ ತಿರುಪತಿಯಲ್ಲಿ ಮಂಗಳವಾರ ಪರಿಸ್ಥಿತಿ ಸುಧಾರಿಸಿದೆ. 3 ದಿನಗಳ ಕಾಲ ಮಳೆ ಸುರಿದು ಆತಂಕಕ್ಕೀಡಾಗಿದ್ದ ಭಕ್ತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಒಂದೇ ದಿನ  ಸಾವಿರಾರು ಮಂದಿ ಪ್ರವಾಸಿಗರು ಹೋಟೆಲ್ ಗಳನ್ನು ತೆರವು ಮಾಡಿದ್ದಾರೆ. ಹೀಗಾಗಿ, ಹೊಸ  ಪ್ರವಾಸಿಗರು ಬರಲಾರಂಭಿಸಿದ್ದಾರೆ.
ತಮಿಳುನಾಡಿನಾದ್ಯಂತ ಭಾರಿ ಮಳೆ ಮಂಗಳವಾರವೂ  ಮುಂದುವರಿದಿದೆ. ಚೆನ್ನೈನಲ್ಲಿರುವ   ರಾಜಭವನ ಸೇರಿದಂತೆ ಆಯಕಟ್ಟಿನ ಸ್ಥಳಗಳಿಗೆ ನೀರು ನುಗ್ಗಿದೆ. ತಾಂಬರಂ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ 2 ಅಡಿ ಪ್ರವಾಹದ ನೀರು ಇತ್ತು  ಎಂದು ವರದಿಯಾಗಿದೆ. ಮಹಾನಗರದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು. ಮುಂದಿನ ಲ24 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ತಮಿಳುನಾಡಿನ ಹವಾಮಾನ ಇಲಾಖೆ ಪ್ರಕಾರ ವಾಯವ್ಯ ಮಾರುತದಿಂದ ಪ್ರಸಕ್ತ ಸಾಲಿ ನಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿದೆ. ಪಾಪನಾಶಂನಲ್ಲಿ 18 ಸೆಂ.ಮೀ., ತಂಬರಂನಲ್ಲಿ 17 ಸೆಂ.ಮೀ. ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT