ಸಾಂದರ್ಭಿಕ ಚಿತ್ರ 
ದೇಶ

ವ್ಯಾಪಾರಕ್ಕೆ ದೇವರ ಹೆಸರು ಬಳಸುವಂತಿಲ್ಲ: ಸುಪ್ರೀಂಕೋರ್ಟ್

``ದೇವರ ಹೆಸರು, ಪವಿತ್ರಗ್ರಂಥಗಳ ಹೆಸರನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ಟ್ರೇಡ್‍ಮಾರ್ಕ್ ಮಾಡಿ ಕೊಳ್ಳುವಂತಿಲ್ಲ,'' ಎಂದು...

ನವದೆಹಲಿ: ``ದೇವರ ಹೆಸರು, ಪವಿತ್ರಗ್ರಂಥಗಳ ಹೆಸರನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ಟ್ರೇಡ್‍ಮಾರ್ಕ್ ಮಾಡಿಕೊಳ್ಳುವಂತಿಲ್ಲ,'' ಎಂದು ಸುಪ್ರೀಂ ಕೋರ್ಟ್ ತೀರ್ಪು  ನೀಡಿದೆ.

``ಕುರಾನ್, ಬೈಬಲ್, ಗುರು ಗ್ರಂಥ ಸಾಹಿಬ್, ರಾಮಾಯಣ ಮುಂತಾದ ಹಲವಾರು ಪವಿತ್ರ ಗ್ರಂಥಗಳ ಹೆಸರನ್ನು ಮಾರಾಟದ ವಸ್ತು ಅಥವಾ ಸೇವೆಗೆ ಬಳಸಿಕೊಳ್ಳಬಹುದೇ,'' ಎಂಬ  ಪ್ರಶ್ನೆಗೆ ಸುಪ್ರೀಂ `ಇಲ್ಲ' ಎಂದಿದೆ. ಕಾನೂನಿನ ಪ್ರಕಾರ ವ್ಯಾಪಾರಕ್ಕೆ ದೇವ ದೇವತೆಗಳ ನೆರವು  ಪಡೆಯುವಂತಿಲ್ಲ. ಇದು ಜನತೆಯ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಿದೆ,'' ಎಂದು ಸುಪ್ರೀಂಕೋ ರ್ಟ್ ಪೀಠ ಹೇಳಿದೆ.

ಬಿಹಾರದ ಲಾಲ್‍ಬಾಬು ಪ್ರಿಯದರ್ಶಿ ಎಂಬ ಕಂಪನಿ ತನ್ನ ಅಗರಬತ್ತಿಗೆ `ರಾಮಾಯಣ' ಎಂದು  ಹೆಸರಿಟ್ಟುಕೊಳ್ಳಲು ಬೌದ್ಧಿಕ ಹಕ್ಕು ಮನವಿ ಮಂಡಳಿಯ ಮುಂದೆ ಕೋರಿಕೊಂಡಿತ್ತು. ಇದನ್ನು  ಅಮೃತ್ ಪಾಲ್ ಸಿಂಗ್ ಎಂಬುವರು ವಿರೋಧಿಸಿದ್ದರು. ಮಂಡಳಿ ಬಿಹಾರ ಕಂಪನಿಗೆ ಈ  ಟ್ರೇಡ್‍ಮಾರ್ಕ್ ನೀಡಲು ನಿರಾಕರಿಸಿತ್ತು. ನ್ಯಾ.ರಂಜನ್ ಗೋಗೋಯ್ ಹಾಗೂ ನ್ಯಾ.ಎನ್ .ವಿ.ರಾಮಣ್ಣ ಅವರನ್ನೊಳಗೊಂಡ ಪೀಠ ಪ್ರಿಯದರ್ಶಿ ಸಂಸ್ಥೆಯ ವಿರುದ್ಧ ತೀರ್ಪಿತ್ತಿದೆ.

``ರಾಮಾಯಣ' ಎಂಬುದು ಧರ್ಮ ಗ್ರಂಥ. ಅದನ್ನು ಟ್ರೇಡ್ ಮಾರ್ಕ್ ರೀತಿ ಬಳಸುವುದು  ವಾಣಿಜ್ಯ ವಹಿವಾಟು ಕಾಯಿದೆ ಪ್ರಕಾರ ಸರಿಯಲ್ಲ ಎಂದು ಪೀಠ 16 ಪುಟಗಳ ತೀರ್ಪಿನಲ್ಲಿ ಹೇಳಿದೆ.  ಅಗರಬತ್ತಿ ಪೊಟ್ಟಣದ ಮೇಲೆ ಮುದ್ರಿಸಲಾಗಿರುವ ರಾಮ, ಲಕ್ಷ್ಮಣ, ಸೀತೆಯರ ಚಿತ್ರಕ್ಕೂ ಕೋರ್ಟ್  ಆಕ್ಷೇಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT