(ಸಂಗ್ರಹ ಚಿತ್ರ) 
ದೇಶ

ಭಾರತದಲ್ಲಿ ಸಹಿಷ್ಣುತೆ ಇದೆ: ಕೇಂದ್ರ ಸರ್ಕಾರ

ವಿವಾದಿತ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರವು ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಸೋಮವಾರ ಹೇಳಿದೆ....

ನವದೆಹಲಿ: ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ವಿವಾದ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು, ಅಸಹಿಷ್ಣುತೆ ಕುರಿತ ಚರ್ಚೆಗೆ ಕೇಂದ್ರ ಸರ್ಕಾರ ತಯಾರಾಗಿದೆ. ಆದರೆ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಲು ಪ್ರತಿಪಕ್ಷಗಳು ಸಹಕಾರ ನೀಡಬೇಕಿದ್ದು, ಕಲಾಪ ಸುಗಮವಾಗಿ ನಡೆಸಲು ವಿಪಕ್ಷಗಳು ಸಂಯಮ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನರೇಂದ್ರ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಅಸಹಿಷ್ಣುತೆ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಈಗಲೇ ದೇಶದಲ್ಲಿ ಸಹಿಷ್ಣುತೆ ಇದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಿಎಸ್ ಟಿ ಮಸೂದೆ ಕುರಿತಂತೆ ಮಾತನಾಡಿರುವ ಅವರು, ಸರಕು ಮತ್ತು ಸೇವಾ ತೆರಿಗೆ ಮಸೂದೆಯು ಮುಂದಿನ ಹಣಕಾಸು ವರ್ಷದಲ್ಲಿ ಜಾರಿಗೆ ಬರಲಿದೆ. ಜಿಎಸ್ ಟಿ ಮಸೂದೆಗೆ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ರಾಜ್ಯಸಭೆಯಸಲ್ಲಿರುವ ವಿರೋಧಗಳು ಮಸೂದೆಯನ್ನು ಆಯ್ಕೆ ಸಮಿತಿಗೆ ಶಿಪಾರಸ್ಸು ಮಾಡಿದೆ. ಇದೀಗ ಆಯ್ಕೆ ಸಮಿತಿ ಕೂಡ ಮಸೂದೆಗೆ ಅಂಗೀಕಾರ ನೀಡಿದ್ದು, ಮಸೂದೆ ಕುರಿತಂತೆ ಆಯ್ಕೆ ಸಮಿತಿ ಈಗಾಗಲೇ ಅಧ್ಯಯನ ನಡೆಸಿದ್ದು, ಈ ಬಗೆಗಿನ ವಿವರಣೆಯನ್ನು ರಾಜ್ಯಸಭೆಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT