(ಸಂಗ್ರಹ ಚಿತ್ರ) 
ದೇಶ

ಭಾರತದಲ್ಲಿ ಸಹಿಷ್ಣುತೆ ಇದೆ: ಕೇಂದ್ರ ಸರ್ಕಾರ

ವಿವಾದಿತ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರವು ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಸೋಮವಾರ ಹೇಳಿದೆ....

ನವದೆಹಲಿ: ಭಾರತದಲ್ಲಿ ಅಸಹಿಷ್ಣುತೆ ಇಲ್ಲ. ಸಹಿಷ್ಣುತೆ ಇದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ವಿವಾದ ಅಸಹಿಷ್ಣುತೆ ವಿವಾದ ಲೋಕಸಭೆಯಲ್ಲಿ ಚರ್ಚೆಯಾಗುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು, ಅಸಹಿಷ್ಣುತೆ ಕುರಿತ ಚರ್ಚೆಗೆ ಕೇಂದ್ರ ಸರ್ಕಾರ ತಯಾರಾಗಿದೆ. ಆದರೆ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಲು ಪ್ರತಿಪಕ್ಷಗಳು ಸಹಕಾರ ನೀಡಬೇಕಿದ್ದು, ಕಲಾಪ ಸುಗಮವಾಗಿ ನಡೆಸಲು ವಿಪಕ್ಷಗಳು ಸಂಯಮ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ನರೇಂದ್ರ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಅಸಹಿಷ್ಣುತೆ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಈಗಲೇ ದೇಶದಲ್ಲಿ ಸಹಿಷ್ಣುತೆ ಇದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಿಎಸ್ ಟಿ ಮಸೂದೆ ಕುರಿತಂತೆ ಮಾತನಾಡಿರುವ ಅವರು, ಸರಕು ಮತ್ತು ಸೇವಾ ತೆರಿಗೆ ಮಸೂದೆಯು ಮುಂದಿನ ಹಣಕಾಸು ವರ್ಷದಲ್ಲಿ ಜಾರಿಗೆ ಬರಲಿದೆ. ಜಿಎಸ್ ಟಿ ಮಸೂದೆಗೆ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ರಾಜ್ಯಸಭೆಯಸಲ್ಲಿರುವ ವಿರೋಧಗಳು ಮಸೂದೆಯನ್ನು ಆಯ್ಕೆ ಸಮಿತಿಗೆ ಶಿಪಾರಸ್ಸು ಮಾಡಿದೆ. ಇದೀಗ ಆಯ್ಕೆ ಸಮಿತಿ ಕೂಡ ಮಸೂದೆಗೆ ಅಂಗೀಕಾರ ನೀಡಿದ್ದು, ಮಸೂದೆ ಕುರಿತಂತೆ ಆಯ್ಕೆ ಸಮಿತಿ ಈಗಾಗಲೇ ಅಧ್ಯಯನ ನಡೆಸಿದ್ದು, ಈ ಬಗೆಗಿನ ವಿವರಣೆಯನ್ನು ರಾಜ್ಯಸಭೆಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT