ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ನವಾಜ್ ಶರೀಫ್ 
ದೇಶ

ಶರೀಫ್'ಯೊಂದಿಗಿನ ಹಸ್ತಲಾಘವ ಮೋದಿ ಸಹಿಷ್ಣುತೆಯನ್ನು ಸೂಚಿಸುತ್ತದೆ: ಶಿವಸೇನೆ

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಯೊಂದಿಗಿನ ಹಸ್ತಲಾಘವ ನಮ್ಮ ಪ್ರಧಾನಿ ಮೋದಿಯವರಲ್ಲಿರುವ ಸಹಿಷ್ಣುತೆಯನ್ನು ಸೂಚಿಸುತ್ತದೆ ಎಂದು ಶಿವಸೇನೆ ಮಂಗಳವಾರ ಹೇಳಿದೆ...

ನವದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಯೊಂದಿಗಿನ ಹಸ್ತಲಾಘವ ನಮ್ಮ ಪ್ರಧಾನಿ ಮೋದಿಯವರಲ್ಲಿರುವ ಸಹಿಷ್ಣುತೆಯನ್ನು ಸೂಚಿಸುತ್ತದೆ ಎಂದು ಶಿವಸೇನೆ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಸಂಜಯ್ ರಾವತ್ ಅವರು, ಪ್ಯಾರೀಸ್ ನಡೆಯುತ್ತಿರುವ ಹವಾಮಾನ ಶೃಂಗಸಭೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವಾಜ್ ಶರೀಫ್ ಅವರೊಂದಿಗೆ ತಾವೇ ಹೋಗಿ ಹಸ್ತಲಾಘವ ಮಾಡಿರುವುದು ಅವರಲ್ಲಿರುವ ಸಹಿಷ್ಣುತೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಅಸಹಿಷ್ಣುತೆ ಎಂಬ ಕೂಗು ಇದೀಗ ದೇಶದೆಲ್ಲೆಡೆ ಕೇಳಿಬರುತ್ತಿದ್ದು, ಮೋದಿಯವರ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯವರು ನವಾಜ್ ಶರೀಫ್ ಅವರನ್ನು ನೋಡಿದ ಕೂಡಲೇ ಅವರೇ ಸ್ವತಃ ನಡೆದುಕೊಂಡು ಹೋಗಿ ಶರೀಫ್ ಅವರಿಗೆ ಹಸ್ತಲಾಘವ ಮಾಡಿದರು. ಇದು ನಮ್ಮ ಪ್ರಧಾನಿಯಲ್ಲಿರುವ ಸಹಿಷ್ಣುತೆಯನ್ನು ಸೂಚಿಸುತ್ತದೆ.

ಭಯೋತ್ಪಾದನೆಯನ್ನು ಪ್ರಚಾರ ಮಾಡುವುದು ದೇಶದಲ್ಲಿ ದೊಡ್ಡ ಅಸಹಿಷ್ಣುತೆಯಾಗಿದೆ. ಅಂತಹುದ್ದನ್ನು ನವಾಜ್ ಶರೀಫ್ ಅವರು ಮಾಡಿದ್ದಾರೆ. ಮೊದಲು ಭಯೋತ್ಪಾದನೆ ಕುರಿತ ಚರ್ಚೆಗಳನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT