ಮನಮೋಹನ್ ಸಿಂಗ್ 
ದೇಶ

ಹಿಂಡಾಲ್ಕೊ ಗೆ ಕಲ್ಲಿದ್ದಲು ಹಂಚಿಕೆ ಮಾಡಲು ಶಿಫಾರಸ್ಸು ಮಾಡಿರಲಿಲ್ಲ : ಮನಮೋಹನ್ ಸಿಂಗ್

ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೊ ಕಂಪನಿಗೆ ನೀಡುವುದಕ್ಕೆ ಶಿಫಾರಸ್ಸು ಮಾಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಿಬಿಐ ಗೆ ತಿಳಿಸಿದ್ದಾರೆ.

ನವದೆಹಲಿ: ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಿಂಡಾಲ್ಕೊ ಕಂಪನಿಗೆ ನೀಡುವುದಕ್ಕೆ ಶಿಫಾರಸ್ಸು ಮಾಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಿಬಿಐ ಗೆ ತಿಳಿಸಿದ್ದಾರೆ.
ಕಲ್ಲಿದ್ದಲು ಹಗರಣದ ವಿಚಾರಣೆ ವೇಳೆ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ, ಹಿಂಡಾಲ್ಕೊ ಕಂಪನಿಗೆ ಕಲ್ಲಿದ್ದಲು ಹಂಚಿಕೆ ಮಾಡುವುದಾಗಿ ಕುಮಾರ್ ಮಂಗಲಂ ಬಿರ್ಲಾ ಗೆ ಭರವಸೆ ನೀಡಿರಲಿಲ್ಲ, ಬಿರ್ಲಾ ಪತ್ರಗಳನ್ನು ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಕುಮಾರ್ ಪಟ್ನಾಯಕ್ ಪತ್ರಗಳನ್ನು ಕೂಲಂಕುಶವಾಗಿ ಪರಿಶೀಲಿಸಲು ಕಲ್ಲಿದ್ದಲು ಸಚಿವಾಲಯಕ್ಕೆ ಕಳಿಸಿದ್ದಾಗಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಕಲ್ಲಿದ್ದಲು ಹಂಚಿಕೆಗೆ ಹಿಂಡಾಲ್ಕೊ ಕಂಪನಿಯನ್ನು ಪರಿಗಣಿಸದೇ ಇದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬದಲಾಯಿಸಲು ಬಿರ್ಲಾ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಗೆ ಪತ್ರ ಬರೆದಿದ್ದರು. ಇದರೊಂದಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಹ ಕೇಂದ್ರ ಸರ್ಕಾರದ ನಿರ್ಧಾರವನ್ನು ಮತ್ತೆ ಪರಿಶೀಲಿಸಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು.
ಹಿಂಡಾಲ್ಕೊ ಸಂಸ್ಥೆಗೆ ಅವಕಾಶ ನೀಡಲು ಸಚಿವಾಲಯ ಮಾಡಿದ್ದ ಶಿಫಾರಸ್ಸನ್ನು ಅನುಮೋದಿಸಿದ್ದೆ. ಆದರೆ ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಮನಮೋಹನ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT