ನಿತಿನ್ ಗಡ್ಕರಿ 
ದೇಶ

ಕಾರ್ಯಕ್ಷಮತೆ ಹೆಚ್ಚಿಸಿ ಇಲ್ಲವೇ ಕಠಿಣ ಕ್ರಮ ಎದುರಿಸಿ: ಅಧಿಕಾರಿಗಳಿಗೆ ಕೇಂದ್ರ ಸಚಿವ ಗಡ್ಕರಿ ಎಚ್ಚರಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ:ರಸ್ತೆ ನಿರ್ಮಾಣ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ವೇಗವಾಗಿ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಇಲ್ಲವೇ ಸ್ವಯಂ ನಿವೃತ್ತಿ ಪಡೆಯಿರಿ ಎಂದು ಗಡ್ಕರಿ ಕಳಪೆ ಕಾರ್ಯನಿರ್ವಹಣೆ ಪ್ರದರ್ಶಿಸುತ್ತಿರುವ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಅಧಿಕಾರಿಗಳ ಕಳಪೆ ಕಾರ್ಯನಿರ್ವಹಣೆ ಭಾರತದ ಅಭಿವೃದ್ಧಿಗೆ ಅಡ್ಡಿಯಾಗಬಾರದು, ಆದ್ದರಿಂದ ಸರಿಯಾಗಿ ಕೆಲಸ ಮಾಡಬೇಕು ಇಲ್ಲವೇ ಸ್ವಯಂ ನಿವೃತ್ತಿ ಪಡೆಯಬೇಕು ಎಂದು ಗಡ್ಕರಿ ತಿಳಿಸಿದ್ದಾರೆ.
ಪ್ರತಿ ನಿತ್ಯ 100 ಕಿ.ಮಿ ರಸ್ತೆ ನಿರ್ಮಾಣ ಗುರಿ ಹೊಂದಿದ್ದು, ರೆಡ್ ಟೇಪ್ ಸಂಸ್ಕೃತಿಯನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಅಂತಹ ಸಂಸ್ಕೃತಿಯನ್ನು ಪಾಲಿಸುವ ಅಧಿಕಾರಿಗಳನ್ನು ಸಹ ಕೇಂದ್ರ ಸರ್ಕಾರ ಸಹಿಸುವುದಿಲ್ಲ, ರೆಡ್ ಟೇಪ್ ಸಂಸ್ಕೃತಿಯನ್ನು ಅನುಸರಿಸುವ ಅಧಿಕಾರಿಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಗಡ್ಕರಿ ಎಚ್ಚರಿಸಿದ್ದಾರೆ.
ಕೆಲಸ ಮಾಡಲು ಇಷ್ಟ ಇಲ್ಲದೇ ಇರುವವರು ದಯಮಾಡಿ ಸ್ವಯಂ ನಿವೃತ್ತಿ ಪಡೆಯಿರಿ, ನಮಗೆ ಸಕಾರಾತ್ಮಕ ಮನೋಭಾವದ ಅಧಿಕಾರಿಗಳು ಬೇಕಾಗಿದ್ದಾರೆ, ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು  ಬದಲಾಯಿಸಿಕೊಳ್ಳುವ ಅಗತ್ಯವಿದ್ದು ಇನ್ನು ಮುಂದೆ ಕಾರ್ಯನಿರ್ವಹಣೆ ಗುಣಮಟ್ಟದ ಬಗ್ಗೆ ಆಡಿಟ್ ನಡೆಸಲಾಗುವುದು, ಕಳಪೆ ಕಾರ್ಯನಿರ್ವಗಣೆ ಕಂಡುಬಂದಲ್ಲಿ ಅಧಿಕಾರಿಗೆ ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಹಿಂಜರಿಯುವುದಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.  
ಭಾರತದಲ್ಲಿ ಬಂಡವಾಳ ಹೂಡಲು ಅನೇಕ ರಾಷ್ಟ್ರಗಳು ಸಿದ್ಧವಾಗಿವೆ. ಪ್ರಮುಖವಾಗಿ ಹೆದ್ದಾರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾಗಲಿದೆ. 5 ಲಕ್ಷ ಕೋಟಿ ಮೌಲ್ಯದ ಕಾಮಗಾರಿ ಜಾರಿಯಾಗಲಿದ್ದು, ಯೋಜನಾ ವರದಿ ತಯಾರಿ ಹಾಗೂ ಕ್ಲಿಯರೆನ್ಸ್(ಪರವಾನಗಿ) ನೀಡುವ ಪ್ರಕ್ರಿಯೆ ವೇಗವಾಗಿ ನಡೆಯಬೇಕಿದೆ. ಆದರೆ ಅಧಿಕಾರಿಗಳು ನಿರ್ಧಾರ ಶೀಘ್ರವಾಗಿ ನಿರ್ಧಾರ ಕೈಗೊಳ್ಳದೇ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುತ್ತಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT