ನಿತಿನ್ ಗಡ್ಕರಿ 
ದೇಶ

ಕಾರ್ಯಕ್ಷಮತೆ ಹೆಚ್ಚಿಸಿ ಇಲ್ಲವೇ ಕಠಿಣ ಕ್ರಮ ಎದುರಿಸಿ: ಅಧಿಕಾರಿಗಳಿಗೆ ಕೇಂದ್ರ ಸಚಿವ ಗಡ್ಕರಿ ಎಚ್ಚರಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ:ರಸ್ತೆ ನಿರ್ಮಾಣ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ವೇಗವಾಗಿ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಇಲ್ಲವೇ ಸ್ವಯಂ ನಿವೃತ್ತಿ ಪಡೆಯಿರಿ ಎಂದು ಗಡ್ಕರಿ ಕಳಪೆ ಕಾರ್ಯನಿರ್ವಹಣೆ ಪ್ರದರ್ಶಿಸುತ್ತಿರುವ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಅಧಿಕಾರಿಗಳ ಕಳಪೆ ಕಾರ್ಯನಿರ್ವಹಣೆ ಭಾರತದ ಅಭಿವೃದ್ಧಿಗೆ ಅಡ್ಡಿಯಾಗಬಾರದು, ಆದ್ದರಿಂದ ಸರಿಯಾಗಿ ಕೆಲಸ ಮಾಡಬೇಕು ಇಲ್ಲವೇ ಸ್ವಯಂ ನಿವೃತ್ತಿ ಪಡೆಯಬೇಕು ಎಂದು ಗಡ್ಕರಿ ತಿಳಿಸಿದ್ದಾರೆ.
ಪ್ರತಿ ನಿತ್ಯ 100 ಕಿ.ಮಿ ರಸ್ತೆ ನಿರ್ಮಾಣ ಗುರಿ ಹೊಂದಿದ್ದು, ರೆಡ್ ಟೇಪ್ ಸಂಸ್ಕೃತಿಯನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಅಂತಹ ಸಂಸ್ಕೃತಿಯನ್ನು ಪಾಲಿಸುವ ಅಧಿಕಾರಿಗಳನ್ನು ಸಹ ಕೇಂದ್ರ ಸರ್ಕಾರ ಸಹಿಸುವುದಿಲ್ಲ, ರೆಡ್ ಟೇಪ್ ಸಂಸ್ಕೃತಿಯನ್ನು ಅನುಸರಿಸುವ ಅಧಿಕಾರಿಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಗಡ್ಕರಿ ಎಚ್ಚರಿಸಿದ್ದಾರೆ.
ಕೆಲಸ ಮಾಡಲು ಇಷ್ಟ ಇಲ್ಲದೇ ಇರುವವರು ದಯಮಾಡಿ ಸ್ವಯಂ ನಿವೃತ್ತಿ ಪಡೆಯಿರಿ, ನಮಗೆ ಸಕಾರಾತ್ಮಕ ಮನೋಭಾವದ ಅಧಿಕಾರಿಗಳು ಬೇಕಾಗಿದ್ದಾರೆ, ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು  ಬದಲಾಯಿಸಿಕೊಳ್ಳುವ ಅಗತ್ಯವಿದ್ದು ಇನ್ನು ಮುಂದೆ ಕಾರ್ಯನಿರ್ವಹಣೆ ಗುಣಮಟ್ಟದ ಬಗ್ಗೆ ಆಡಿಟ್ ನಡೆಸಲಾಗುವುದು, ಕಳಪೆ ಕಾರ್ಯನಿರ್ವಗಣೆ ಕಂಡುಬಂದಲ್ಲಿ ಅಧಿಕಾರಿಗೆ ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಹಿಂಜರಿಯುವುದಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.  
ಭಾರತದಲ್ಲಿ ಬಂಡವಾಳ ಹೂಡಲು ಅನೇಕ ರಾಷ್ಟ್ರಗಳು ಸಿದ್ಧವಾಗಿವೆ. ಪ್ರಮುಖವಾಗಿ ಹೆದ್ದಾರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾಗಲಿದೆ. 5 ಲಕ್ಷ ಕೋಟಿ ಮೌಲ್ಯದ ಕಾಮಗಾರಿ ಜಾರಿಯಾಗಲಿದ್ದು, ಯೋಜನಾ ವರದಿ ತಯಾರಿ ಹಾಗೂ ಕ್ಲಿಯರೆನ್ಸ್(ಪರವಾನಗಿ) ನೀಡುವ ಪ್ರಕ್ರಿಯೆ ವೇಗವಾಗಿ ನಡೆಯಬೇಕಿದೆ. ಆದರೆ ಅಧಿಕಾರಿಗಳು ನಿರ್ಧಾರ ಶೀಘ್ರವಾಗಿ ನಿರ್ಧಾರ ಕೈಗೊಳ್ಳದೇ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುತ್ತಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT