ಚಂದ್ರ ಕುಮಾರ್ ಬೋಸ್ 
ದೇಶ

ಶಾಸ್ತ್ರಿ ನಿಗೂಢ ಸಾವಿನ ಕಡತಗಳು ಬಯಲಾಗಲಿ: ನೇತಾಜಿ ಕುಟುಂಬ ಸದಸ್ಯರ ಆಗ್ರಹ

ನೇತಾಜಿ ಸುಭಾಷ್ ಚಂದ್ರ ಬೋಸ್ ಕುಟುಂಬ ಸದಸ್ಯರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಿಗೂಢ ಸಾವಿನ ರಹಸ್ಯ ಬಯಲಾಗಬೇಕಾದರೆ ರಹಸ್ಯ ಕಡತಗಳನ್ನು ಬಹಿರಂಗಪಡಿಸಲು ಒತ್ತಾಯಿಸಿದ್ದಾರೆ.

ಕೋಲ್ಕತ್ತ: ನೇತಾಜಿ ಸುಭಾಷ್ ಚಂದ್ರ ಬೋಸ್ ಕುಟುಂಬ ಸದಸ್ಯರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಿಗೂಢ ಸಾವಿನ ರಹಸ್ಯ ಬಯಲಾಗಬೇಕಾದರೆ ರಹಸ್ಯ ಕಡತಗಳನ್ನು ಬಹಿರಂಗಪಡಿಸಲು ಒತ್ತಾಯಿಸಿದ್ದಾರೆ.
ಲಾಲ್ ಬಹದ್ದೂರ್ ಶಾಸ್ತ್ರಿ ಭಾರತೀಯ ಹೆಮ್ಮೆಯ ಪುತ್ರರಲ್ಲೊಬ್ಬರು, ಭಾರತ ಕಂಡ ಶ್ರೇಷ್ಠ ಪ್ರಧಾನಿಗಳು. ತಾಷ್ಕೆಂಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ  ನಿಗೂಢವಾಗಿ ಸಾವನ್ನಪ್ಪಿದರು. ಅವರ ಸಾವಿನ ರಹಸ್ಯ ಈ ವರೆಗೂ ಬಯಲಾಗಿಲ್ಲ ಎಂದು ಸುಭಾಷ್ ಚಂದ್ರ ಬೋಸ್ ಅವರ ಸೋದರ ಸಂಬಂಧಿ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.
ರಷ್ಯಾದಿಂದ ವಾಪಸ್ಸಾದ ನಂತರ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದಂತೆ ತನಿಖಾ ಆಯೋಗವನ್ನು ರಚಿಸುವುದಾಗಿ ನನ್ನ ತಂದೆ ಅಮಿಯಾನಾಥ್ ಬೋಸರಿಗೆ ಲಾಲ್ ಬಹದ್ದೂರ್ ಶಾಸ್ತ್ರಿ ಭರವಸೆ ನೀಡಿದ್ದರು ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.
ರಷ್ಯಾದಿಂದ ವಾಪಸ್ಸಾಗುವುದಕ್ಕೂ ಮುನ್ನವೇ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನಿಗೂಢ ಸಾವಿಗೀಡಾಗಿದ್ದರು, ಶಾಸ್ತ್ರಿ ಅವರ ನಿಗೂಢ ಸಾವಿನ ರಹಸ್ಯ ಬಯಲಾಗಬೇಕು ಎಂದು ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT