ಕಾಂಗ್ರೆಸ್ ಮುಖಂಡ ಅಜೆಯ್ ಮಾಕನ್ (ಸಂಗ್ರಹ ಚಿತ್ರ) 
ದೇಶ

ಶಾಸ್ತ್ರಿಗೆ ಗೌರವ ಸಲ್ಲಿಸದ ಮೋದಿ, ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಜಯ್ ಘಾಟ್‍ಗೆ ತೆರಳಿ ಲಾಲ್‍ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ಸಲ್ಲಿಸಲಿಲ್ಲ. ಪ್ರಧಾನಿಯವರ ಈ ವರ್ತನೆ `ದುರದೃಷ್ಟಕರ' ಎಂದು ಕಾಂಗ್ರೆಸ್ ಟೀಕಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಜಯ್ ಘಾಟ್‍ಗೆ ತೆರಳಿ ಲಾಲ್‍ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ಸಲ್ಲಿಸಲಿಲ್ಲ. ಪ್ರಧಾನಿಯವರ ಈ ವರ್ತನೆ `ದುರದೃಷ್ಟಕರ' ಎಂದು  ಕಾಂಗ್ರೆಸ್ ಟೀಕಿಸಿದೆ.

ಶಾಸ್ತ್ರಿ ಭಾರತದ ಪ್ರಧಾನಮಂತ್ರಿಯಾಗಿದ್ದವರು. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಕಾಂಗ್ರೆಸ್ ಅಧ್ಯಕ್ಷರು ಎಲ್ಲರೂ ಅಲ್ಲಿಗೆ ತೆರಳಿ ಗೌರವ ಸಲ್ಲಿಸಿರುವಾಗ, ಪ್ರಧಾನಿಗೆ ಏನು ಸಮಸ್ಯೆಯಾಗಿತ್ತೋ ಗೊತ್ತಿಲ್ಲ. ಗಾಂಧಿಯವರ ರಾಜ್ ಘಾಟ್‍ಗೆ ಸಮೀಪದಲ್ಲೇ ಅದು ಇತ್ತು ಎಂದು ಕಾಂಗ್ರೆಸ್ ವಕ್ತಾರ ಅಜಯ್ ಮಾಕನ್ ಟೀಕಿಸಿದರು. ಕಾಂಗ್ರೆಸ್ ಮುಖಂಡ  ಮತ್ತು ಶಾಸ್ತ್ರಿಯವರ ಮಗ ಅನಿಲ್ ಶಾಸ್ತ್ರಿ, ಕಳೆದ ಐವತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ವಿಜಯ್ ಘಾಟ್‍ಗೆ ಭೇಟಿ ನೀಡದೆ ಉಳಿದಿದ್ದಾರೆ ಎಂದು ಗುರುತಿಸಿದ್ದಾರೆ.  ಆದರೆ, ಮೋದಿ ಟ್ವಿಟ್ಟರ್‍ನಲ್ಲಿ ಶಾಸ್ತ್ರಿಯವರಿಗೆ ಪ್ರಣಾಮ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT