ಶುಲ್ಕ ಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾದ ಬಾಲಕ 
ದೇಶ

ದುಬಾರಿ ಶಾಲಾ ಶುಲ್ಕ ಪಾವತಿ ಮಾಡಲಾಗದೇ ವಿದ್ಯಾರ್ಥಿ ಆತ್ಮಹತ್ಯೆ..!

ಶಿಕ್ಷಣದ ವ್ಯಾಪಾರೀಕರಣ ಬಾಲಕನೊಬ್ಬನ ಜೀವ ಪಡೆದಿದೆ. ಶುಲ್ಕ ಪಾವತಿಸದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿ ಬಾಲಕ ತೆಲಂಗಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ...

ಕರೀಂನಗರ: ಶಿಕ್ಷಣದ ವ್ಯಾಪಾರೀಕರಣ ಬಾಲಕನೊಬ್ಬನ ಜೀವ ಪಡೆದಿದೆ. ಶುಲ್ಕ ಪಾವತಿಸದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿ ಬಾಲಕ  ತೆಲಂಗಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸತೀಶ್ ಆತ್ಮಹತ್ಯೆ ಮಾಡಿಕೊಂಡಾತ. ಆರ್ಥಿಕ ಸಮಸ್ಯೆಯಿಂದಾಗಿ ಈತನ ಕುಟುಂಬ ಶಾಲೆಯವರು ಕೇಳಿದಷ್ಟು ಶುಲ್ಕ ಪಾವತಿಸಿರಲಿಲ್ಲ. ಈ ಸಂಬಂಧ ವಿಚಾರಣೆ ನಡೆಸಿದ ಪ್ರಾಂಶುಪಾಲರು  ಆತನ ಕೆನ್ನೆಗೆ ಬಾರಿಸಿದ್ದರು. ನಂತರ ಇತರೆ 6 ವಿದ್ಯಾರ್ಥಿಗಳ ಜತೆಗೆ ತರಗತಿ ಹೊರಗೆ ನಿಲ್ಲಿಸಿದ್ದರು. ತೀವ್ರ ಅವಮಾನಕ್ಕೀಡಾದ ಸತೀಶ್ ಮಧ್ಯಾಹ್ನದ ಊಟದ ವೇಳೆಗೆ ಮನೆಗೆ ವಾಪಸಾಗಿದ್ದ. ನಂತರ ಸಂಬಂಧಿಯೋಬ್ಬನಿಂದ ಮೊಬೈಲ್ ಪಡೆದುಕೊಂಡು ಅದರಲ್ಲಿ ತನ್ನ ಕೊನೆಯ ಹೇಳಿಕೆಗಳನ್ನು ವಿಡಿಯೋ ದಾಖಲು ಮಾಡಿಕೊಂಡಿದ್ದಾನೆ.

ಈಗಾಗಲೇ ರು.5 ಸಾವಿರ ಶುಲ್ಕ ಪಾವತಿಸಿದ್ದೇನೆ. ಇದಕ್ಕಿಂತ ಹೆಚ್ಚಿನ ಹಣ ಪಾವತಿಸಲು ಹೆತ್ತವರಿಗೆ ಸಾಧ್ಯವಾಗಿಲ್ಲ ಎಂದೂ ಹೇಳಿರುವುದು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT