ಮನಮೋಹನ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಕಾರ್ಯದರ್ಶಿ ಶಿಫಾರಸ್ಸಿನ ಪ್ರಕಾರ ಆದೇಶ ನೀಡಿದ್ದೆ: ಮನಮೋಹನ್ ಸಿಂಗ್

ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಅವರ ಸಲಹೆಯ ಮೇರೆಗೆ ಹಿಂಡಾಲ್ಕೊ ಕಂಪನಿಗೆ ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ

ನವದೆಹಲಿ: ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಅವರ ಸಲಹೆಯ ಮೇರೆಗೆ ಹಿಂಡಾಲ್ಕೊ ಕಂಪನಿಗೆ ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಲು ಅನುಮೋದನೆ ನೀಡಿದ್ದಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಹಿಂಡಾಲ್ಕೊ ಕಂಪನಿಗೆ ಕಲ್ಲಿದ್ದಲು ಹಂಚಿಕೆ ಮಾಡುವಂತೆ ಒಡಿಶಾ ಮುಖ್ಯಮಂತ್ರಿಯ ನವೀನ್ ಪಟ್ನಾಯಕ್ ಅವರ ಮನವಿಯನ್ನು ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಹಾಗೂ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರವೇ ಕಲ್ಲಿದ್ದಲು ಹಂಚಿಕೆಗೆ ಅನುಮೋದನೆ ನೀಡಿದ್ದೇನೆ ಎಂದಿದ್ದಾರೆ. ಹಿಂಡಾಲ್ಕೊ ಕಂಪನಿಯ ಮಹತ್ವದ ಯೋಜನೆಯೊಂದಕ್ಕೆ ಕಲ್ಲಿದ್ದಲು ಲಿಂಕೇಜ್ ಕಲ್ಪಿಸಬೇಕು ಎಂದಷ್ಟೇ ನವೀನ್ ಪಟ್ನಾಯಕ್ ಅಂದಿನ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು. ಅದನ್ನು ಸರ್ಕಾರ ಮಂಜೂರು ಮಾಡಿತ್ತು, ಆದಾಗ್ಯೂ ತಲಾಬಿರಾ-2 ಕಲ್ಲಿದ್ದಿಲಿನ ಷೇರಿನಲ್ಲಿ ಹಿಂಡಾಲ್ಕೊ ಕಂಪನಿಯನ್ನು ಪರಿಗಣಿಸಿದ್ದೇಕೆ ಎಂಬ ಸಿಬಿಐ ಪ್ರಶ್ನೆಗೆ ಉತ್ತರಿಸಿರುವ ಮನಮೋಹನ್ ಸಿಂಗ್, ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಶಿಫಾರಸ್ಸನ್ನು ಆಧರಿಸಿ ಅನುಮೋದನೆ ನೀಡಲಾಯಿತು ಎಂದಿದ್ದಾರೆ.
ಕಲ್ಲಿದ್ದಲು ಲಿಂಕೇಜ್ ಪಡೆಯುವುದಕ್ಕಿಂತಲೂ ನಿಕ್ಷೇಪ ಪಡೆಯುವುದು ಹಿಂಡಾಲ್ಕೊ ಕಂಪನಿಗೆ ಲಾಭದಾಯಕವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT