ಮನಮೋಹನ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಕಾರ್ಯದರ್ಶಿ ಶಿಫಾರಸ್ಸಿನ ಪ್ರಕಾರ ಆದೇಶ ನೀಡಿದ್ದೆ: ಮನಮೋಹನ್ ಸಿಂಗ್

ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಅವರ ಸಲಹೆಯ ಮೇರೆಗೆ ಹಿಂಡಾಲ್ಕೊ ಕಂಪನಿಗೆ ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ

ನವದೆಹಲಿ: ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಅವರ ಸಲಹೆಯ ಮೇರೆಗೆ ಹಿಂಡಾಲ್ಕೊ ಕಂಪನಿಗೆ ತಲಾಬಿರಾ-2 ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಲು ಅನುಮೋದನೆ ನೀಡಿದ್ದಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಹಿಂಡಾಲ್ಕೊ ಕಂಪನಿಗೆ ಕಲ್ಲಿದ್ದಲು ಹಂಚಿಕೆ ಮಾಡುವಂತೆ ಒಡಿಶಾ ಮುಖ್ಯಮಂತ್ರಿಯ ನವೀನ್ ಪಟ್ನಾಯಕ್ ಅವರ ಮನವಿಯನ್ನು ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಪಿಸಿ ಪಾರಖ್ ಹಾಗೂ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರವೇ ಕಲ್ಲಿದ್ದಲು ಹಂಚಿಕೆಗೆ ಅನುಮೋದನೆ ನೀಡಿದ್ದೇನೆ ಎಂದಿದ್ದಾರೆ. ಹಿಂಡಾಲ್ಕೊ ಕಂಪನಿಯ ಮಹತ್ವದ ಯೋಜನೆಯೊಂದಕ್ಕೆ ಕಲ್ಲಿದ್ದಲು ಲಿಂಕೇಜ್ ಕಲ್ಪಿಸಬೇಕು ಎಂದಷ್ಟೇ ನವೀನ್ ಪಟ್ನಾಯಕ್ ಅಂದಿನ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು. ಅದನ್ನು ಸರ್ಕಾರ ಮಂಜೂರು ಮಾಡಿತ್ತು, ಆದಾಗ್ಯೂ ತಲಾಬಿರಾ-2 ಕಲ್ಲಿದ್ದಿಲಿನ ಷೇರಿನಲ್ಲಿ ಹಿಂಡಾಲ್ಕೊ ಕಂಪನಿಯನ್ನು ಪರಿಗಣಿಸಿದ್ದೇಕೆ ಎಂಬ ಸಿಬಿಐ ಪ್ರಶ್ನೆಗೆ ಉತ್ತರಿಸಿರುವ ಮನಮೋಹನ್ ಸಿಂಗ್, ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಶಿಫಾರಸ್ಸನ್ನು ಆಧರಿಸಿ ಅನುಮೋದನೆ ನೀಡಲಾಯಿತು ಎಂದಿದ್ದಾರೆ.
ಕಲ್ಲಿದ್ದಲು ಲಿಂಕೇಜ್ ಪಡೆಯುವುದಕ್ಕಿಂತಲೂ ನಿಕ್ಷೇಪ ಪಡೆಯುವುದು ಹಿಂಡಾಲ್ಕೊ ಕಂಪನಿಗೆ ಲಾಭದಾಯಕವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT