ಲಾಲು ಪ್ರಸಾದ್ ಯಾದವ-ನರೇಂದ್ರ ಮೋದಿ 
ದೇಶ

ಮೋದಿ ಕಲಿಯುಗದ ಧೃತರಾಷ್ಟ್ರ, ಬರೀ ಅಂಧನಲ್ಲ, ಕಿವುಡ, ಮೂಕನೂ ಕೂಡ: ಲಾಲು

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಕೆಸರೆರಚಾಟ ಆರಂಭವಾಗಿದ್ದು, ಪ್ರಧಾನಿ...

ಬಿಹಾರ: ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಕೆಸರೆರಚಾಟ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿರುವ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್, ಮೋದಿಯನ್ನು ಧೃತರಾಷ್ಟ್ರ ಎಂದು ಕರೆದಿದ್ದಾರೆ.
ನರೇಂದ್ರ ಮೋದಿ ಕಲಿಯುಗದ ಧೃತರಾಷ್ಟ್ರ. ಹಸ್ತೀನಾಪುರದಲ್ಲಿ ಕುಳಿತಿರುವ ಈ ಕಲಿಯುಗದ ಈ ಧೃತರಾಷ್ಟ್ರ ಕೇವಲ ಅಂಧನಲ್ಲ. ಜೊತೆಗೆ ಕಿವುಡ, ಮೂಕನು ಕೂಡ ಆಗಿದ್ದಾನೆ ಎಂದು ಲಾಲು ಟ್ವೀಟರ್ ನಲ್ಲಿ ಟೀಕಿಸಿದ್ದಾರೆ.
ತೋರಿಕೆಗೆ ಮಾತ್ರ ಕಿರುಚಾಡುವ ಕಲಿಯುಗ ಈ ಧೃತರಾಷ್ಟ್ರ ಒಳಗಿನಿಂದ ಭಯಪಡುವ ಪುಕ್ಲ. ಏನಾದರೂ ಹೇಳಬೇಕು ಎನ್ನುವ ಸಂದರ್ಭದಲ್ಲಿ ಮೌನವಾಗಿ ಕುಳಿತಿರುತ್ತಾರೆ ಎಂದು ಲಾಲು ಟ್ವೀಟ್ ಮಾಡಿದ್ದಾರೆ.
ಹೊರಗಿನಿಂದ ಬಂದವರು ಬಿಹಾರದಲ್ಲಿ ಆಡಳಿತ ನಡೆಸಲು ಹುನ್ನಾರ ನಡೆಸುತ್ತಿದ್ದಾರೆ. ಆದರೆ ಅದಕ್ಕೆ, ಬಿಹಾರದ ಜನತೆ ಹೊರಗಿನವರಿಗೆ ಆಡಳಿತ ನಡೆಸಲು ಬಿಡುವುದಿಲ್ಲ. ಗುಜರಾತಿನವರಿಂದ ಬಿಹಾರವನ್ನು ಹಾಳು ಮಾಡಲು ನಾವು ಬಿಡುವುದಿಲ್ಲ ಎಂದು ಲಾಲು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT