ಹಾರ್ದಿಕ್ ಪಟೇಲ್ ಮೇಲೆ ಹಣ ಎರಚುತ್ತಿರುವ ಜನ 
ದೇಶ

ಹಾರ್ದಿಕ್ ಪಟೇಲ್ ಮೇಲೆ ಹಣದ ಮಳೆ ಸುರಿದ ಜನ

ಅನಾಮತ್ ಹೋರಾಟ ಸಮಿತಿಯ ಮುಖಂಡ ಹಾರ್ದಿಕ್ ಪಟೇಲ್ ಮೇಲೆ ಜನ ಹಣದ ಮಳೆ ಸುರಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ...

ಅಹಮದಾಬಾದ್: ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಅನಾಮತ್ ಹೋರಾಟ ಸಮಿತಿಯ ಮುಖಂಡ  ಹಾರ್ದಿಕ್ ಪಟೇಲ್ ಮೇಲೆ ಜನ ಹಣದ ಮಳೆ ಸುರಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಗುಜರಾತ್ ರಾಜ್ಯದ ಸೂರತ್ ನ ಗೋಸಮದಾ ಗ್ರಾಮದಲ್ಲಿ ನಡೆದ ಜಾನಪದ ಗಾಯನ 'ದೇರೋ'  ಎಂಬ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಟೇಲ್ ಪಾಲ್ಗೊಂಡಿದ್ದರು.

ಹಾರ್ದಿಕ್ ಪಟೇಲ್ ಮಾತನಾಡುತ್ತಿದ್ದ ವೇಳೆ 100, 500 ಹಾಗೂ 1000 ರೂ. ನೋಟುಗಳ ಕಂತೆಯನ್ನು ಜನತೆ ಅವರ ಮೇಲೆ ಎರಚಿದ್ದರಲ್ಲದೇ 'ಜೈ ಪಾಟಿದಾರ್', 'ಜೈ ಸರ್ದಾರ್' ಎಂಬ ಘೋಷಣೆಗಳನ್ನೂ ಕೂಗಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು.

ಹಣ ಎರಚಬೇಡಿ ಎಂದು ಮನವಿ ಮಾಡಿಕೊಂಡರೂ ಜನ ಕೇಳಲಿಲ್ಲ. ಗುಜರಾತ್ ನಲ್ಲಿ 'ದೇರೋ' ಕಾರ್ಯಕ್ರಮದಲ್ಲಿ ಹಣ ತೂರುವುದು ಸಾಮಾನ್ಯವಾಗಿದ್ದು, ಅದರಲ್ಲೂ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಕಾರ್ಯಕ್ರಮಕ್ಕೆ ಬಂದ ಹಿನ್ನಲೆಯಲ್ಲಿ ಪಟೇಲ್ ಸಮುದಾಯದವರು ಇನ್ನಷ್ಟು ಉತ್ಸಾಹದಿಂದ ಹಣ ಎರಚಿದ್ದಾರೆ ಎಂದು ಹಾರ್ದಿಕ್ ಪಾಟೀಲ್ ನಿಕಟವರ್ತಿ ದಿನೇಶ್ ಬಂಬಾನಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT