(ಸಾಂದರ್ಭಿಕ ಚಿತ್ರ) 
ದೇಶ

ನಾಯಕನನ್ನು ಮೆಚ್ಚಿಸಲು ಪಾರಿವಾಳಗಳಿಗೆ ಪಟಾಕಿ ಕಟ್ಟಿ ಹಾರಿಬಿಟ್ಟ ಕಾಂಗ್ರೆಸ್ ಕಾರ್ಯಕರ್ತರು

ತಮ್ಮ ನೆಚ್ಚಿನ ನಾಯಕನನ್ನು ಮೆಚ್ಚಿಸುವ ಸಲುವಾಗಿ ಆತನನ್ನು ಸ್ವಾಗತಿಸಲು ಪಾರಿವಾಳಗಳಿಗೆ ಪಟಾಕಿ ಕಟ್ಟಿ ಮೇಲಕ್ಕೆ ಹಾರಿಬಿಟ್ಟಿರುವ ಘಟನೆಯೊಂದು ಶನಿವಾರ ಗೋದಾವರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ...

ಹೈದರಾಬಾದ್: ತಮ್ಮ ನೆಚ್ಚಿನ ನಾಯಕನನ್ನು ಮೆಚ್ಚಿಸುವ ಸಲುವಾಗಿ ಆತನನ್ನು ಸ್ವಾಗತಿಸಲು ಪಾರಿವಾಳಗಳಿಗೆ ಪಟಾಕಿ ಕಟ್ಟಿ ಮೇಲಕ್ಕೆ ಹಾರಿಬಿಟ್ಟಿರುವ ಘಟನೆಯೊಂದು ಶನಿವಾರ ಗೋದಾವರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೋರಿ ಆಂಧ್ರಪ್ರದೇಶ ಕಾಂಗ್ರೆಸ್ ಸಮತಿ ಅಧ್ಯಕ್ಷ ಎನ್.ರಘುವೀರ ರೆಡ್ಡಿ ಅವರು ಗೋದಾವರಿಗೆ ಭೇಟಿ ನೀಡಿದ್ದರು. ಈ ವೇಳೆ ನಾಯಕನನ್ನು ಸ್ವಾಗತಿಸುವ ಸಂತಸದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮೇಲಕ್ಕೆ ಹಾರುವಾಗ ಪಾರಿವಾಳಗಳು ಪಟಾಕಿಯಿಂದ ಬೇರ್ಪಡುತ್ತದೆ ಎಂಬ ಮೂರ್ಖತನದಿಂದ ಪಾರಿವಾಳಗಳಿಗೆ ಕತ್ತಿಗೆ ತಮ್ಮ ಪಕ್ಷದ ಬಾವುಟ ಕಟ್ಟಿ ನಂತರ ಅವುಗಳ ದೇಹಕ್ಕೆ ಪಟಾಕಿ ಕಟ್ಟಿ ಬೆಂಕಿ ಹಚ್ಚಿ ಮೇಲಕ್ಕೆ ಹಾರಿ ಬಿಟ್ಟಿದ್ದಾರೆ. ಮೇಲಕ್ಕೆ ಹೋಗುತ್ತಿದ್ದಂತೆ ಪಟಾಕಿ ಸಿಡಿದಿದೆ. ಈ ವೇಳೆ ಪಟಾಕಿ ಸಿಡಿದ ಕಾರಣ ಪಾರಿವಾಳಗಳು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಈ ದುಷ್ಕೃತ್ಯವೀಗ ಪ್ರಾಣಿ ಸ್ನೇಹಿಗಳನ್ನು ಕೆರಳಿಸಿದ್ದು, ಅಪರಾಧಿಗಳ ವಿರುದ್ಧ ಇದೀಗ ಅಲ್ಲಿನ ಪೊಲೀಸರು ಸೆಕ್ಷನ್ 11 (ಪ್ರಾಣಿಗಳ ವಿರುದ್ಧದ ಕ್ರೂರತ್ವ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಪ್ರತಿಕ್ರಿಯೆ ನೀಡಿರುವ ರಘುವೀರ್ ರೆಡ್ಡಿ ಅವರು, ಪಾರಿವಾಳಿಗಳಿಗೆ ಪಟಾಕಿ ಕಟ್ಟಿ ಹಾರಿ ಬಿಟ್ಟಿರುವ ವಿಷಯ ನನಗೆ ಗೊತ್ತಿಲ್ಲ. ಪಟಾಕಿಗಳನ್ನು ಸಿಡಿಸುತ್ತಿರುವುದಷ್ಟೇ ನನ್ನ ಆರಿವಿಗೆ ಬಂದಿದ್ದು, ಈ ರೀತಿ ಮಾಡುವುದು ನಿಜಕ್ಕೂ ತಪ್ಪು. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT