ಸಾಂದರ್ಭಿಕ ಚಿತ್ರ 
ದೇಶ

ನಕ್ಸಲರಿಂದ 3 ಟಿಡಿಪಿ ನಾಯಕರ ಅಪಹರಣ

ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು...

ಹೈದರಾಬಾದ್: ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲೀಯರು ತಮ್ಮ ಜಾಲ ವ್ಯವಸ್ಥೆಯ ಮೂಲಕ ಟಿಡಿಪಿ ನಾಯಕರಿಗೆ ಕರೆ ಮಾಡಿ ವಿಶಾಖಪಟ್ಟಣಂ ಜಿಲ್ಲೆಯ ದಾರ್ಕೊಂಡ ಪ್ರದೇಶದಲ್ಲಿ ನಿನ್ನೆ ಅಪರಾಹ್ನ ಭೇಟಿ ಮಾಡುವಂತೆ  ತಿಳಿಸಿದ್ದಾರೆ. ಅದರಂತೆ ಇವರು ಹೋದಾಗ ಬಂಧಿಸಿದ್ದಾರೆ ಎಂದು ವಿಶಾಖಪಟ್ಟಣಂನ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪ್ರವೀಣ್ ತಿಳಿಸಿದ್ದಾರೆ.

ಬಂಧಿತರಿಗೆ ಯಾವುದೇ ಹಾನಿ ಮಾಡುವುದಿಲ್ಲ ಎಂದು ನಕ್ಸಲೀಯರು ಭರವಸೆ ನೀಡಿದ್ದಾರೆ ಎಂದು ಅವರನ್ನು ಭೇಟಿ ಮಾಡಿರುವ ಟಿಡಿಪಿ ಮುಖಂಡರಾದ ಎಂ.ಬಾಲಯ್ಯ, ಮಹೇಶ್ ಮತ್ತು ವಿ.ಬಾಲಯ್ಯ ತಿಳಿಸಿದ್ದಾರೆ. ಪೊಲೀಸರಿಗೆ ಕಳೆದ ರಾತ್ರಿ ಮಾಹಿತಿ ಸಿಕ್ಕಿದೆ.

ನಾವು ಮಾಹಿತಿ ಕಲೆ ಹಾಕುತ್ತಿದ್ದೇವೆ. ಮಾವೋವಾದಿಗಳು ಅವರನ್ನು ಪೂರ್ವ ಗೋದಾವರಿ ಜಿಲ್ಲೆಯ ದಟ್ಟ ಅರಣ್ಯಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ. ಮಾವೋವಾದಿಗಳ ಬೇಡಿಕೆಗಳೇನು ಎಂಬುದು ತಿಳಿಯಬೇಕಾಗಿದೆ ಎಂದು ಪ್ರವೀಣ್ ಹೇಳಿದ್ದಾರೆ.

ಗೋದಾವರಿ ಅರಣ್ಯದಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ವಿರೋಧಿಸಿ ಟಿಡಿಪಿ ಮುಖಂಡರನ್ನು ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT