ಸಾಂದರ್ಭಿಕ ಚಿತ್ರ 
ದೇಶ

ನಕ್ಸಲರಿಂದ 3 ಟಿಡಿಪಿ ನಾಯಕರ ಅಪಹರಣ

ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು...

ಹೈದರಾಬಾದ್: ತೆಲುಗು ದೇಶಂ ಪಕ್ಷದ ಮೂವರು ನಾಯಕರನ್ನು ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಕ್ಸಲೀಯರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲೀಯರು ತಮ್ಮ ಜಾಲ ವ್ಯವಸ್ಥೆಯ ಮೂಲಕ ಟಿಡಿಪಿ ನಾಯಕರಿಗೆ ಕರೆ ಮಾಡಿ ವಿಶಾಖಪಟ್ಟಣಂ ಜಿಲ್ಲೆಯ ದಾರ್ಕೊಂಡ ಪ್ರದೇಶದಲ್ಲಿ ನಿನ್ನೆ ಅಪರಾಹ್ನ ಭೇಟಿ ಮಾಡುವಂತೆ  ತಿಳಿಸಿದ್ದಾರೆ. ಅದರಂತೆ ಇವರು ಹೋದಾಗ ಬಂಧಿಸಿದ್ದಾರೆ ಎಂದು ವಿಶಾಖಪಟ್ಟಣಂನ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪ್ರವೀಣ್ ತಿಳಿಸಿದ್ದಾರೆ.

ಬಂಧಿತರಿಗೆ ಯಾವುದೇ ಹಾನಿ ಮಾಡುವುದಿಲ್ಲ ಎಂದು ನಕ್ಸಲೀಯರು ಭರವಸೆ ನೀಡಿದ್ದಾರೆ ಎಂದು ಅವರನ್ನು ಭೇಟಿ ಮಾಡಿರುವ ಟಿಡಿಪಿ ಮುಖಂಡರಾದ ಎಂ.ಬಾಲಯ್ಯ, ಮಹೇಶ್ ಮತ್ತು ವಿ.ಬಾಲಯ್ಯ ತಿಳಿಸಿದ್ದಾರೆ. ಪೊಲೀಸರಿಗೆ ಕಳೆದ ರಾತ್ರಿ ಮಾಹಿತಿ ಸಿಕ್ಕಿದೆ.

ನಾವು ಮಾಹಿತಿ ಕಲೆ ಹಾಕುತ್ತಿದ್ದೇವೆ. ಮಾವೋವಾದಿಗಳು ಅವರನ್ನು ಪೂರ್ವ ಗೋದಾವರಿ ಜಿಲ್ಲೆಯ ದಟ್ಟ ಅರಣ್ಯಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ. ಮಾವೋವಾದಿಗಳ ಬೇಡಿಕೆಗಳೇನು ಎಂಬುದು ತಿಳಿಯಬೇಕಾಗಿದೆ ಎಂದು ಪ್ರವೀಣ್ ಹೇಳಿದ್ದಾರೆ.

ಗೋದಾವರಿ ಅರಣ್ಯದಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ವಿರೋಧಿಸಿ ಟಿಡಿಪಿ ಮುಖಂಡರನ್ನು ನಕ್ಸಲೀಯರು ಬಂಧಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT