ಶೀನಾ ಬೋರಾ -ಇಂದ್ರಾಣಿ ಮುಖರ್ಜಿ 
ದೇಶ

ಇಂದ್ರಾಣಿ ಊಟಕ್ಕೆ ವಿಷ? ಜೈಲು ಸಿಬ್ಬಂದಿ, ಅಡುಗೆಯವರ ವಿಚಾರಣೆ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ದಿಢೀರ್ ಅಸ್ವಸ್ಥತೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಇದೀಗ...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ದಿಢೀರ್ ಅಸ್ವಸ್ಥತೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಇದೀಗ ಪೊಲೀಸರು ಇಂದ್ರಾಣಿಗೆ ನೀಡಿದ ಊಟದಲ್ಲಿ ವಿಷ ಬೆರೆಸಲಾಗಿತ್ತೇ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ತನಿಖೆಗೆ ನಡೆಸುತ್ತಿರುವ ಪೊಲೀಸರು ಈ ಸಂಬಂಧ ಬೈಕುಲ್ಲಾ ಜೈಲು ಸಿಬ್ಬಂದಿ ಹಾಗೂ ಅಡುಗೆಯವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇಂದ್ರಾಣಿ ಚಿಕಿತ್ಸೆ ಪಡೆಯುತ್ತಿರುವ ಜೆಜೆ ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆಕೆ ಎರಡು ದಿನಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಳು ಎನ್ನಲಾಗಿದೆ. ಇನ್ನು ವೈದ್ಯರು ಸಹ ಈ ಮೊದಲು ಮಾತ್ರೆಗಳ ಪ್ರಮಾಣ ಜಾಸ್ತಿಯಾಗಿ ಅಸ್ವಸ್ಥರಾಗಿರುವ ಶಂಕೆ ವ್ಯಕ್ತಪಡಿಸಿದ್ದರು. ಆದರೆ ವಿಧಿ ವಿಜ್ಞಾನ ಪ್ರಯೋಗಾಲದ ಇಂದ್ರಾಣಿ ರಕ್ತ ಹಾಗೂ ಮೂತ್ರ ಪರೀಕ್ಷೆಯ ವರದಿ ಈ ಸಾಧ್ಯತೆಯನ್ನು ತಳ್ಳಿಹಾಕಿದೆ.

ಜೈಲಿನಲ್ಲಿ ಯಾರಾದರೂ ಇಂದ್ರಾಣಿಗೆ ಊಟದಲ್ಲಿ ವಿಷ ಬೆರೆಸಿ ಹತ್ಯೆ ಮಾಡುವ ಯತ್ನ ಮಾಡಿದ್ದಾರೆಯೇ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಹಲವು ದಿನಗಳಿಂದ ಇಂದ್ರಾಣಿ ಮೂರ್ಛೆ ರೋಗಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು. ಹೀಗಾಗಿ ಅದನ್ನು ಮುಂದುವರೆಸಿಕೊಂಡು ಹೋಗಲು ಅನುಮತಿ ನೀಡಲಾಗಿದೆ. ಆದರೆ ಆಕೆಗೆ ಆತ್ಮಹತ್ಯೆ ಮಾಡಿಕೊಳ್ಳಲು ಜೈಲು ಸಿಬ್ಬಂದಿ ಸಹಕರಿಸಿರುವ ಸಾಧ್ಯತೆ ಕಾಣುತ್ತಿಲ್ಲ' ಎಂದಿದ್ದಾರೆ.

'ಯಾರಾದರೂ ಇಂದ್ರಾಣಿಗೆ ವಿಷ ನೀಡಿ ಕೊಲೆ ಮಾಡುವ ಯತ್ನ ನಡೆಸಿದ್ದಾರೆಯೇ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಈ ಸಂಬಂಧ ತನಿಖಾಧಿಕಾರಿ ಜೈಲು ಅಧಿಕಾರಿ, ಇತರೆ ಸಿಬ್ಬಂದಿ ಹಾಗೂ ಅಡುಗೆಯವರು ಸೇರಿದಂತೆ ಇಂದ್ರಾಣಿ ಜತೆ ಸಂಪರ್ಕದಲ್ಲಿರುವ ಎಲ್ಲರ ಹೇಳಿಕೆಗಳನ್ನು' ದಾಖಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಮಹಾನಿರ್ದೇಶ(ಜೈಲು) ಬಿಪಿನ್ ಕುಮಾರ್ ಸಿಂಗ್ ಅವರು ಇಂದ್ರಾಣಿ ಅಸ್ವಸ್ಥತೆಗೆ ಸಂಬಂಧಿಸಿದಂತೆ ಶುಕ್ರವಾರದೊಳಗೆ ವರದಿ ನೀಡಲಿದ್ದಾರೆ ಎಂದು ಗೃಹ ಕಾರ್ಯದರ್ಶಿ ವಿಜಯ್ ಸತ್ಬಿರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT