ಮೃತ ವ್ಯಕ್ತಿಯ ಕುಟುಂಬಸ್ಥರು 
ದೇಶ

ದಾದ್ರಿ ಹತ್ಯೆ ಪ್ರಕರಣ: ಯುಪಿ ಸರ್ಕಾರ ನೀಡಿದ ವರದಿಯಲ್ಲಿ ಗೋಮಾಂಸದ ಪ್ರಸ್ತಾಪವಿಲ್ಲ

ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲೇಶ್ ಯಾದವ್ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯಲ್ಲಿ...

ಲಕ್ನೋ: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲೇಶ್ ಯಾದವ್ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯಲ್ಲಿ ಎಲ್ಲಿಯೂ ಗೋಮಾಂಸದ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದು ಬಂದಿದೆ.

ವರದಿಯಲ್ಲಿ 'ಗೋ ಮಾಂಸ ಭಕ್ಷಣೆ ಅಥವಾ ಗೋ ಮಾಂಸ ಸಂಗ್ರಹ' ಎಂಬ ವಿಷಯವನ್ನೇ ಕೈ ಬಿಡಲಾಗಿದೆ. ಈ ರೀತಿಯ ಗಾಳಿ ಸುದ್ದಿ ಹರಡಿಯೇ ಮೊಹಮ್ಮದ್ ಅಖ್ಲಾಖ್ ಅವರನ್ನು ಕೊಲ್ಲಲಾಗಿದೆ ಎಂದು ಎಫ್‌ಐಆರ್‌ನಲ್ಲಿಯೂ ದಾಖಲಿಸಲಾಗಿದೆ.

ಘಟನೆ ನಡೆದ ನಾಲ್ಕು ದಿನಗಳ ನಂತರ ರಾಜ್ಯ ಸರಕಾರ  ಕೇಂದ್ರಕ್ಕೆ ವರದಿ ನೀಡಿದೆ. ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿ, ಎಫ್‌ಐಆರ್‌ನಲ್ಲಿ ದಾಖಲಿಸಿದ ಅಂಶಗಳನ್ನೇ ಕೈ ಬಿಡಲಾಗಿದೆ. ವರದಿಯಲ್ಲಿ ಅಪರಿಚಿತ ವ್ಯಕ್ತಿಗಳಿಂದ ಅಖ್ಲಾಖ್ ಹಾಗೂ ಅವರ ಮಗನ ಮೇಲೆ 'ಮಾರಾಟ ನಿಷೇಧಿಸಿದ ಪ್ರಾಣಿಯೊಂದರ ಮಾಂಸ ಸೇವಿಸಿದ' ಆರೋಪದ ಮೇಲೆ ಹಲ್ಲೆ ನಡೆಸಲಾಗಿದೆ, ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯಾವ ಕಾರಣದಿಂದ ಗಲಭೆ ನಡೆದ ಸಾಧ್ಯತೆ ಇದೆಯೋ, ಆ ಅಂಶವನ್ನು ಉತ್ತರ ಪ್ರದೇಶ ಸರಕಾರ ಕೇಂದ್ರಕ್ಕೆ ನೀಡಿದ ವರದಿಯಲ್ಲಿ ಸೇರಿಸಿಲ್ಲ. ದಾದ್ರಿಯಲ್ಲಿ ದಾಖಲಿಸಿದ ಎಫ್‌ಐಆರ್ ಅನ್ನು ಪುನರ್ ರಚಿಸಲಾಗಿದೆ, ಎಂದು ಹಿರಿಯ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT