ಅಖ್ಲಾಕ್ ಕುಟುಂಬಸ್ಥರು 
ದೇಶ

ದಾದ್ರಿ ಹತ್ಯೆ ಪ್ರಕರಣ: ಅಖ್ಲಾಕ್ ಕುಟುಂಬಸ್ಥರು ದೆಹಲಿಗೆ ಸ್ಥಳಾಂತರ

ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸೇವನೆ ಮಾಡಿದ್ದಾರೆಂಬ ಆರೋಪದಲ್ಲಿ ಹಲ್ಲೆಗೊಳಗಾಗಿ ಮೃತ ಪಟ್ಟ ಅಕ್ಲಾಕ್ ಕುಟುಂಬಸ್ಥರು ದೆಹಲಿಗೆ ಸ್ಥಳಾಂತರಗೊಂಡಿದ್ದಾರೆ...

ನವದೆಹಲಿ: ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸೇವನೆ ಮಾಡಿದ್ದಾರೆಂಬ ಆರೋಪದಲ್ಲಿ ಹಲ್ಲೆಗೊಳಗಾಗಿ ಮೃತ ಪಟ್ಟ ಅಕ್ಲಾಕ್ ಕುಟುಂಬಸ್ಥರು ದೆಹಲಿಗೆ ಸ್ಥಳಾಂತರಗೊಂಡಿದ್ದಾರೆ.

ಭಾರತೀಯ ವಾಯುಪಡೆ ಮೃತ ಅಖ್ಲಾಕ್ ಕುಟುಂಬವನ್ನು ದೆಹಲಿಯಲ್ಲಿರುವ ವಾಯುನೆಲೆಗೆ ಸ್ಥಳಾಂತರಿಸಿದೆ. ಅಕ್ಲಾಕ್ ಅವರ ಹಿರಿಯ ಮಗ ಭಾರತೀಯ ವಾಯುಪಡೆಯಲ್ಲಿ ಕೆಳಗಿನ ದರ್ಜೆಯ ಟೆಕ್ನಿಷಿಯನ್‌ ಆಗಿದ್ದಾರೆ.

ಇಕ್ಲಾಖ್ ಕುಟುಂಬ ಸೋಮವಾರ ರಾತ್ರಿಯೇ ದಾದ್ರಿಯಿಂದ ದೆಹಲಿಯ ಸುಬ್ರತೊ ಪಾರ್ಕ್‌ಗೆ ಸ್ಥಳಾಂತರಗೊಂಡಿದೆ. ಇಕ್ಲಾಖ್ ಕುಟುಂಬವನ್ನು ದೆಹಲಿಗೆ ಸ್ಥಳಾಂತರಿಸಲು ಇರುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿರುವುದಾಗಿ ‘ಐಎಎಫ್‌’ ಮುಖ್ಯಸ್ಥ ಅರೂಪ್‌ ರಾಹ ಅವರು ಅಕ್ಟೋಬರ್‌ 3 ರಂದು ಹೇಳಿದ್ದರು.

ಅಖ್ಲಾಕ್ ನಿಧನದ ನಂತರ, ದಾದ್ರಿಯಲ್ಲಿ ಹೇರಿದ್ದ ನಿಷೇಧ ಉಲ್ಲಂಘಿಸಿದ ಕಾರಣಕ್ಕೆ  ಕೇಂದ್ರ ಸಚಿವ  ಮಹೇಶ್‌ ಶರ್ಮಾ, ಬಿಜೆಪಿ ಮುಖಂಡ ಸಂಗೀತ್‌ ಸೋಮ್‌, ಬಿಎಸ್‌ಪಿ ಮುಖಂಡ ನಸೀಮುದ್ದೀನ್‌ ಸಿದ್ದಿಕಿ, ಹಿಂದೂ ರಕ್ಷಾದಳದ ಓಂಜಿ ಮಹಾರಾಜ್‌ ಮತ್ತು ಪರ್ವೇಜ್‌ ವಿರುದ್ಧ ಸ್ಥಳೀಯ ಜಿಲ್ಲಾಡಳಿತ  ಪ್ರಕರಣ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT