ಚುನಾವಣೆ ಪ್ರಯುಕ್ತ ಬಾಗಲ್ಪುರ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಹಿಂದೂಗಳು ಗೋಮಾಂಸ ತಿನ್ನುತ್ತಾರೆ; ಲಾಲೂ ಹೇಳಿಕೆಗೆ ಸ್ಪಷ್ಟನೆ ನೀಡಿ: ಅಮಿತ್ ಶಾ

ಉತ್ತರ ಪ್ರದೇಶದಲ್ಲಿ ಈ ವರೆಗೂ ಗೋಮಾಂಸ ಸೇವನೆ ವಿವಾದ ತಣ್ಣಗಾದಂತಿಲ್ಲ. ನಾಯಕರು ವಿರೋಧ ಪಕ್ಷದ ನಾಯಕರ ನಡುವಿನ ವಾಕ್ಸಮರ ಮುಂದುವರೆಯತ್ತಲೇ ಇದೆ. ಈ ಹಿಂದೆ ಲಾಲೂ ಪ್ರಸಾದ್ ಯಾದವ್ ಅವರು ನೀಡಿದ್ದ ಹೇಳಿಕೆ ಕುರಿತಂತೆ ಬಿಹಾರ ಮುಖ್ಯಮಂತ್ರಿ...

ಲಕ್ಷಿಸರಾಯ್: ಉತ್ತರ ಪ್ರದೇಶದಲ್ಲಿ ಈ ವರೆಗೂ ಗೋಮಾಂಸ ಸೇವನೆ ವಿವಾದ ತಣ್ಣಗಾದಂತಿಲ್ಲ. ನಾಯಕರು ವಿರೋಧ ಪಕ್ಷದ ನಾಯಕರ ನಡುವಿನ ವಾಕ್ಸಮರ ಮುಂದುವರೆಯತ್ತಲೇ ಇದೆ. ಈ ಹಿಂದೆ ಲಾಲೂ ಪ್ರಸಾದ್ ಯಾದವ್ ಅವರು ನೀಡಿದ್ದ ಹೇಳಿಕೆ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸ್ಪಷ್ಟನೆ ನೀಡುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಸ್ಪಷ್ಟನೆ ಕೇಳಿದ್ದಾರೆ.

ಬಿಹಾರ ಚುನಾವಣೆ ಪ್ರಯುಕ್ತ ಇಂದು ಪಾಟ್ನದ ಲಕ್ಷಿಸರಾಯ್ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಲಾಲೂ ಹೇಳಿಕೆ ಕುರಿತಂತೆ ಈ ವರೆಗೂ ನಿತೀಶ್ ಕುಮಾರ್ ಆಗಲೀ ರಾಹುಲ್ ಗಾಂಧಿಯಾಗಲೀ ಸ್ಪಷ್ಟನೆ ನೀಡಿಲ್ಲ. ಈ ಮೌನಕ್ಕೆ ಕಾರಣವೇನು. ಮೊದಲು ಲಾಲೂ ಅವರ ಹೇಳಿಕೆ ವಿರುದ್ಧವೋ ಅಥವಾ ಪರವೋ ಎಂಬ ಕುರಿತಂತೆ ಬಹಿರಂಗ ಹೇಳಿಕೆ ನೀಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಮೀಸಲಾತಿ ಕುರಿತಂತೆ ಆರ್ ಎಸ್ ಎಸ್ ವಿರುದ್ಧ ನಿತೀಸ್ ಹಾಗೂ ಲಾಲೂ ನೀಡಿದ್ದ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, ಜನರಲ್ಲಿ ಅಪನಂಬಿಕೆ ಹುಟ್ಟಿಸುವ ಕೆಲಸ ಮಾಡಬೇಡಿ. ಆರ್ ಎಸ್ಎಸ್ ಬಗ್ಗೆ ನನಗಿಂತ ಯಾರಿಗೆ ಗೊತ್ತು. ಉದ್ಯೋಗಕ್ಕೆ ಸಂಬಂಧಿಸಿದಂತಿರುವ ಮೀಸಲಾತಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಹೇಳಿದ್ದಾರೆ.

ಮಿಸ್ಟರ್ ನಿತೀಶ್ ಕುಮಾರ್ ಹಾಗೂ ಮಿಸ್ಟರ್ ಲಾಲೂ ಪ್ರಸಾದ್ ಇಬ್ಬರೂ ಕೈ ಜೋಡಿಸಿದ್ದು ಬಿಹಾರ ರಾಜ್ಯ 25 ವರ್ಷದಿಂದ ಅಭಿವೃದ್ಧಿ ಕಾಣದಂತೆ ಮಾಡಿದ್ದಾರೆ. ಈಗಲೂ ಬಿಹಾರ ಜನತೆ ಶಿಕ್ಷಣಕ್ಕಾಗಿ ಇತರೆ ರಾಜ್ಯಗಳಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ. 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗುವ ಆಕಾಂಕ್ಷೆಯಲ್ಲಿದ್ದರು. ಈ ವೇಳೆ ಹಬ್ಬವನ್ನು ಆಚರಿಸಿದ್ದರು. ಪ್ರಧಾನಿಯಾಗುವ ಕನಸು ಕಾಣುತ್ತಿರುವ ನಿತೀಶ್ ಕುಮಾರ್ ಅವರ ಪಕ್ಷ ಜೆಡಿಯು ಹೊರರಾಜ್ಯಗಳಾದ ಕರ್ನಾಟಕ ಗುಜರಾತ್, ಮಹಾರಾಷ್ಟ್ರ, ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಒಂದು ರಾಜ್ಯದಲ್ಲಾದರೂ ಅಧಿಕಾರದಲ್ಲಿದೆಯೇ ನಿತೀಶ್ ಪ್ರಧಾನಿಯಾಗಲು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT