ಪ್ರಣಬ್ ಮುಖರ್ಜಿ 
ದೇಶ

ದೇಶದಲ್ಲಿ ಸಾಮರಸ್ಯ ಕಾಪಾಡಿ: ಪ್ರಣಬ್ ಮುಖರ್ಜಿ

ಭಾರತದ ಸಂಸ್ಕೃತಿಗೆ ಧಕ್ಕೆ ತರುವಂಥಾ ಘಟನೆಗಳಿಗೆ ನಾವು ಆಸ್ಪದಕೊಡುವುದಿಲ್ಲ, ವೈವಿಧ್ಯತೆಯಲ್ಲಿ ಏಕತೆಯನ್ನು ಮೆರೆಯುವ...

ನವದೆಹಲಿ: ಭಾರತದ ಸಂಸ್ಕೃತಿಗೆ ಧಕ್ಕೆ ತರುವಂಥಾ ಘಟನೆಗಳಿಗೆ ನಾವು ಆಸ್ಪದಕೊಡುವುದಿಲ್ಲ, ವೈವಿಧ್ಯತೆಯಲ್ಲಿ ಏಕತೆಯನ್ನು ಮೆರೆಯುವ ದೇಶ ನಮ್ಮದು. ನಾವು ಪರಸ್ಪರ ಸಹಕಾರ, ಸಾಮರಸ್ಯದಿಂದ ಬಾಳಿ ಬದುಕಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೇಳಿದ್ದಾರೆ.
ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಜನರು ಸಾಮರಸ್ಯ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ದಾದ್ರಿ ಘಟನೆಯ ಬಗ್ಗೆ ಖೇದ ವ್ಯಕ್ತ ಪಡಿಸಿದ ಮುಖರ್ಜಿ, ನಮ್ಮ ಹಳೇ ಮೌಲ್ಯಗಳು ಈಗ ನಶಿಸಿ ಹೋಗುತ್ತಿವೆ. ನಮ್ಮ ಪ್ರಜಾಪ್ರಭುತ್ವಕ್ಕೆ ಅದರದ್ದೇ ಆದ ಗೌರವವಿದೆ. ಅದನ್ನು ಮನಸ್ಸಲ್ಲಿಟ್ಟುಕೊಂಡರೆ ನಾವು ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಬಹುದು. 
ಗೋಮಾಂಸ ಭಕ್ಷಿಸಿದ್ದಾನೆ ಎಂಬ ಸಂದೇಹದಡಿಯಲ್ಲಿ ಉತ್ತರ ಪ್ರದೇಶದ ದಾದ್ರಿಯಲ್ಲಿ 52 ರ ಹರೆಯದ ಮೊಹಮ್ಮದ್ ಅಖ್ಲಾಕ್ ಎಂಬಾತನನ್ನು ಹೊಡೆದು ಸಾಯಿಸಲಾಗಿತ್ತು. ಈ ಘಟನೆಯ ಬಗ್ಗೆ ರಾಜಕಾರಣಿಗಳು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದೂ ವಿವಾದ ಸೃಷ್ಟಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT